Advertisement

ನಾರ್ವೆ ಮಾದರಿ ತಡೆಗೋಡೆ ಕೈಬಿಟ್ಟ ರಾಜ್ಯ ಸರ್ಕಾರ

10:49 PM Dec 23, 2019 | Team Udayavani |

ಬಾಗಲಕೋಟೆ: ರಾಜ್ಯದ ಅತಿ ದೊಡ್ಡ ಕೃಷ್ಣಾ ಮೇಲ್ದಂಡೆಯ 3ನೇ ಹಂತದ ಯೋಜನೆ ಅನುಷ್ಠಾನದ ವೇಳೆ ಮುಳುಗಡೆ ಯಾಗುವ 12 ಗ್ರಾಮ ಹಾಗೂ ಸಾವಿರಾರು ಎಕರೆ ಭೂ ಸ್ವಾಧೀನ ಮಾಡಿಕೊಳ್ಳುವುದನ್ನು ತಡೆಯಲು ನಾರ್ವೆ ದೇಶದ ಮಾದರಿಯಲ್ಲಿ ತಡೆಗೋಡೆ ನಿರ್ಮಾಣ ಯೋಜನೆ ಕೈಬಿಡುವಂತೆ ಡಿಸಿಎಂ ಗೋವಿಂದ ಕಾರಜೋಳ ಅಧಿಕಾರಿ ಗಳಿಗೆ ಸೂಚಿಸಿದ್ದಾರೆ.

Advertisement

ಸೋಮವಾರ ಯುಕೆಪಿ ಅಧಿಕಾರಿಗಳ ಸಭೆ ನಡೆಸಿದ ಡಿಸಿಎಂ ಕಾರಜೋಳ, ನಾರ್ವೆ ಮಾದರಿ ತಡೆಗೋಡೆ ನಮ್ಮಲ್ಲಿ ಸಾಧ್ಯವಿಲ್ಲ. ಅದನ್ನು ಕೈಬಿಟ್ಟು, ಕೂಡಲೇ ಭೂ ಸ್ವಾಧೀನ ಪ್ರಕ್ರಿಯೆ ಆರಂಭಿಸಬೇಕು ಎಂದರು. ನ್ಯಾ. ಬ್ರಿಜೇಶಕುಮಾರ ನೇತೃತ್ವದ ಕೃಷ್ಣಾ ನ್ಯಾಯಾಧಿಕರಣದ ಅಂತಿಮ ತೀರ್ಪಿನಲ್ಲಿ ರಾಜ್ಯಕ್ಕೆ 170 ಟಿಎಂಸಿ ಅಡಿ ನೀರು ಹಂಚಿಕೆಯಾಗಿದ್ದು, ಆಲಮಟ್ಟಿ ಜಲಾಶಯವನ್ನು 524.256 ಮೀಟರ್‌ಗೆ ಎತ್ತರಿಸಲು ಅನುಮತಿ ನೀಡಿದೆ.

ಜಲಾಶಯ ಎತ್ತರಿಸಿದಾಗ ಬಾಗಲಕೋಟೆ ನಗರದ 3 ಸಾವಿರ ಕಟ್ಟಡ, ಅವಳಿ ಜಿಲ್ಲೆಯ 20 ಗ್ರಾಮಗಳು, 97 ಸಾವಿರ ಎಕರೆ ಭೂಮಿ ಹಿನ್ನೀರಿನಲ್ಲಿ ಮುಳುಗಡೆಯಾಗುತ್ತದೆ. ಇದನ್ನು ತಡೆಯಲು ನಾರ್ವೆ ಮಾದರಿ ತಡೆಗೋಡೆ ನಿರ್ಮಿಸಲು ಹಿಂದಿನ ಕಾಂಗ್ರೆಸ್‌ ಸರ್ಕಾರ ಚಿಂತಿಸಿತ್ತು. ಇದಕ್ಕಾಗಿ ಯೋಜನೆ ರೂಪಿಸಿ ಸುಮಾರು 5 ಸಾವಿರ ಕೋಟಿ ವೆಚ್ಚದಲ್ಲಿ ತಡೆಗೋಡೆ ನಿರ್ಮಿಸಿ ಜಮೀನು ಮತ್ತು ಗ್ರಾಮಗಳನ್ನು ಉಳಿಸಲು ಸಾಧ್ಯವಿದೆ ಎಂದು ತಿಳಿಸಲಾಗಿತ್ತು. ಈ ಕುರಿತು ಪರ-ವಿರೋಧ ವ್ಯಕ್ತವಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next