Advertisement

ಬ್ಯುಸಿನೆಸ್‌ ಪಾರ್ಕ್‌ ಅಭಿವೃದ್ಧಿಗೆರಾಜ್ಯ ಸರ್ಕಾರ ಅನುಮೋದನೆ

11:20 AM Feb 06, 2018 | |

ವಿಧಾನಮಂಡಲ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊಂದಿಕೊಂಡಿರುವ 407 ಎಕರೆ ಜಾಗದಲ್ಲಿ “ಬೆಂಗಳೂರು ಸಿಗ್ನೇಚರ್‌ ಬ್ಯುಸಿನೆಸ್‌ ಪಾರ್ಕ್‌’ ಅಭಿವೃದ್ಧಿಪಡಿಸಲು ಸರ್ಕಾರ ಅನುಮೋದನೆ ನೀಡಿದೆ ಎಂದು ರಾಜ್ಯಪಾಲ ವಜೂಭಾಯಿ ವಾಲಾ ತಿಳಿಸಿದ್ದಾರೆ.

Advertisement

ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದ ಅವರು, 1,440 ಕೋಟಿ ರೂ. ವೆಚ್ಚದಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ಸಮಾವೇಶ ಕೇಂದ್ರ ಸ್ಥಾಪನೆಗೂ ಸರ್ಕಾರ ಅನುಮೋದನೆ ನೀಡಿದೆ ಎಂದು ಹೇಳಿದರು.

ಬೆಂಗಳೂರು ಮೆಟ್ರೋ ಎರಡನೇ ಹಂತದ 72 ಕಿ.ಮೀ. ಮಾರ್ಗ ನಿರ್ಮಾಣವನ್ನು 2021ರ ಮಾರ್ಚ್‌ ಒಳಗಾಗಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ಬೆಂಗಳೂರು ಮೆಟ್ರೋ ಪಾಲಿಟನ್‌ ಪ್ರದೇಶಕ್ಕೆ ಉಪ ನಗರ ರೈಲ್ವೆ ಪರಿಚಯಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
 
ತ್ಯಾಜ್ಯ ನೀರಿನ ಸಂಪೂರ್ಣ ಶುದ್ಧೀಕರಣ: ಬೆಂಗಳೂರಿನಲ್ಲಿರುವ ಕೆರೆಗಳ ರಕ್ಷಣೆ ಮತ್ತು ಸಂರಕ್ಷಣೆಗೆ ಕ್ರಮ ಕೈಗೊಂಡಿದ್ದು, ತ್ಯಾಜ್ಯ ನೀರಿನ ಶುದ್ಧೀಕರಣಕ್ಕೆ ಯೋಜನೆ ರೂಪಿಸಲಾಗಿದೆ. ಪ್ರಸ್ತುತ ದಿನಕ್ಕೆ 84.6 ಕೋಟಿ ಲೀಟರ್‌ ತ್ಯಾಜ್ಯ ನೀರು ಶುದ್ಧೀಕರಿಸುತ್ತಿದ್ದು, 21.1 ಕೋಟಿ ಲೀ. ತ್ಯಾಜ್ಯ ನೀರು ಶುದ್ಧೀಕರಿಸುವ ಸಾಮರ್ಥ್ಯದ ಘಟಕಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗಿದೆ. ಜತೆಗೆ 44
ಕೋಟಿ ಲೀ. ತ್ಯಾಜ್ಯ ನೀರು ಸಂಸ್ಕರಿಸುವ ಸಾಮರ್ಥ್ಯ ಹೊಂದಿರುವ ನಾಲ್ಕು ಘಟಕಗಳನ್ನು 1,203 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲು ಯೋಜನೆ ರೂಪಿಸಲಾಗಿದ್ದು, 2020ರ ವೇಳೆಗೆ ಯೋಜನೆ ಪೂರ್ಣಗೊಳ್ಳಲಿದೆ. ಆಗ ನಗರದ ಶೇ.100ರಷ್ಟು ತ್ಯಾಜ್ಯ ನೀರು ಶುದ್ಧೀಕರಣಗೊಳ್ಳಲಿದೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next