Advertisement

ಕೋವಿಡ್ ಸೋಂಕು ನಿಯಂತ್ರಣ ಮತ್ತು ನಿರ್ವಹಣೆಗೆ ರಾಜ್ಯ ಸರಕಾರ 566 ಕೋಟಿ ರೂ. ಬಿಡುಗಡೆ

10:31 PM Apr 17, 2021 | Team Udayavani |

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೊರೊನಾ ಸೋಂಕು ನಿಯಂತ್ರಿಸಲು ಹಾಗೂ ನಿರ್ವಹಣೆಗೆ ಸರ್ಕಾರವು ವಿಕೋಪ ಪರಿಹಾರ ನಿಧಿ ಅಡಿಯಲ್ಲಿ 566 ಕೋಟಿ ರೂ. ಬಿಡುಗಡೆ ಮಾಡಿದೆ.

Advertisement

ಈ ಪೈಕಿ 300 ಕೋಟಿ ರೂ. ಬಿಬಿಎಂಪಿಗೆ ಹಾಗೂ 266 ಕೋಟಿ ರೂ. ರಾಜ್ಯದ ವಿವಿಧ ಜಿಲ್ಲೆಗಳಿಗೆ ಬಿಡುಗಡೆ ಮಾಡಲಾಗಿದೆ. ಬಿಬಿಎಂಪಿ ಸೇರಿ ಜಿಲ್ಲೆಗಳ ಬೇಡಿಕೆ ಆಧಾರದ ಮೇಲೆ ಹಣ ಬಿಡುಗಡೆ ಮಾಡಲಾಗಿದೆ.

ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಕೊರೊನಾ ಸೋಂಕಿತರ ಚಿಕಿತ್ಸೆ, ಅಗತ್ಯ ಪರಿಕರಗಳು, ಸಿಬ್ಬಂದಿ ವೇತನ, ಸ್ಯಾನಿಟೈಸರ್‌, ಹೋಟೆಲ್‌, ಕಲ್ಯಾಣ ಮಂಟಪ, ವಿದ್ಯಾರ್ಥಿ ನಿಲಯ ನಿಗದಿ ಮಾಡುವುದು ,ಸೀಲ್‌ಡೌನ್‌ ಸೇರಿದಂತೆ ನಿಯಂತ್ರಣ ಕ್ರಮಗಳಿಗೆ ಬಳಕೆ ಮಾಡಿಕೊಳ್ಳಲು ಷರತ್ತು ವಿಧಿಸಿ ಅನುದಾನ ಮಂಜೂರು ಮಾಡಲಾಗಿದೆ.

ಇದನ್ನೂ ಓದಿ :ನಟ ವಿವೇಕ್‌ಗೆ ಭಾವಪೂರ್ಣ ವಿದಾಯ : ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ

Advertisement

Udayavani is now on Telegram. Click here to join our channel and stay updated with the latest news.

Next