Advertisement

84 ಕೈದಿಗಳ ಬಿಡುಗಡೆಗೆ ಮಾಡಲು ರಾಜ್ಯ ಸರಕಾರ ಸಿದ್ಧತೆ

11:49 PM Jul 13, 2022 | Team Udayavani |

ಬೆಂಗಳೂರು: “ಆಜಾದಿ ಕಾ ಅಮೃತ್‌ ಮಹೋತ್ಸವ’ ಅಂಗವಾಗಿ ರಾಜ್ಯದ ವಿವಿಧ ಜೈಲುಗಳಲ್ಲಿ ಶಿಕ್ಷೆ ಅನುಭವಿಸುತ್ತಿರುವ 84 ಕೈದಿಗಳನ್ನು ಸನ್ನಡತೆ ಆಧಾರದ ಮೇಲೆ ಬಿಡುಗಡೆ ಮಾಡಲು ರಾಜ್ಯ ಸರಕಾರ ನಿರ್ಧರಿಸಿದೆ.

Advertisement

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಸನ್ನಡತೆ ಆಧಾರದ ಮೇಲೆ ಕೈದಿಗಳನ್ನು ಬಿಡುಗಡೆ ಮಾಡ ಲಾಗುತ್ತದೆ. ಅದೇ ರೀತಿ ಈ ವರ್ಷ 75ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಬೆಂಗಳೂರು, ಬಳ್ಳಾರಿ, ಬೆಳಗಾವಿ, ಶಿವಮೊಗ್ಗ, ದಾವಣಗೆರೆ, ಮೈಸೂರು, ಕಲಬುರಗಿ ಸೇರಿ ವಿವಿಧ ಕಾರಾಗೃ ಹಗಳಲ್ಲಿರುವ 80 ಮಂದಿ ಪುರುಷರು ಮತ್ತು 4 ಮಂದಿ ಮಹಿಳೆಯರನ್ನು ಹೆಸರನ್ನು ಉಲ್ಲೇಖಿಸಿ ಕಾರಾಗೃಹ ಇಲಾಖೆ ರಾಜ್ಯ ಸರಕಾರಕ್ಕೆ ಪಟ್ಟಿ ಸಿದ್ಧಪಡಿಸಿ ಕಳುಹಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next