ಬೆಂಗಳೂರು: 2018ರ ಮಾರ್ಚ್ ಅಂತ್ಯಕ್ಕೆ ಕರ್ನಾ ಟಕವನ್ನು ಬಯಲು ಬಹಿರ್ದೆಸೆ ಮುಕ್ತ ರಾಜ್ಯವನ್ನಾಗಿ ಘೋಷಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಎಚ್.ಕೆ. ಪಾಟೀಲ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ 47 ಲಕ್ಷ ಶೌಚಾಲಯ ನಿರ್ಮಾಣ ಮಾಡಿದ್ದು ಶೇ.86 ರಷ್ಟು ಪ್ರಗತಿಯಾಗಿದೆ. ಉಳಿದ 18 ಲಕ್ಷ ಶೌಚಾಲಯಗಳನ್ನು ಮಾರ್ಚ್ ಅಂತ್ಯಕ್ಕೆ ಪೂರ್ಣ ಗೊಳಿಸಿ
ಬಯಲು ಬಹಿರ್ದೆಸೆ ಮುಕ್ತ ರಾಜ್ಯವನ್ನಾಗಿ ಮಾಡುತ್ತೇವೆ ಎಂದರು.
ಶೌಚಾಲಯಕ್ಕಾಗಿ ಸಮರ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದೆ. ಈಗಾಗಲೇ 16 ಜಿಲ್ಲೆಗಳ 97 ತಾಲೂಕುಗಳು 3454 ಗ್ರಾಮ ಪಂಚಾಯತಿಗಳು 18536 ಗ್ರಾಮಗಳು ಬಯಲು ಬಹಿರ್ದೆಸೆ ಮುಕ್ತವಾಗಿದ್ದು, ಜನವರಿ ಅಂತ್ಯಕ್ಕೆ ಚಿಕ್ಕಬಳ್ಳಾಪುರ, ಮೈಸೂರು, ಕೊಪ್ಪಳ ಹಾಗೂ ಚಾಮರಾಜನಗರ ಜಿಲ್ಲೆಗಳು ಬಯಲು ಬಹಿರ್ದೆಸೆ ಮುಕ್ತವಾಗಲಿವೆ ಎಂದರು.