Advertisement

ಮುಸ್ಲಿಂ ವೋಟ್‌ಬ್ಯಾಂಕ್‌ಗೆ ಸಿಎಂ ಇಲ್ಲಸಲ್ಲದ ಹೇಳಿಕೆ

06:55 AM Jan 12, 2018 | Team Udayavani |

ಚಿಕ್ಕಮಗಳೂರು: ಸಿಎಂ ಸಿದ್ದರಾಮಯ್ಯ ಮುಸ್ಲಿಂ ವೋಟ್‌ ಬ್ಯಾಂಕ್‌ಗಾಗಿ ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆಂದು
ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್‌ ಮುತಾಲಿಕ್‌ ತಿರುಗೇಟು ನೀಡಿದರು.

Advertisement

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಉಗ್ರಗಾಮಿ ಸಂಘಟನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ತಾವು ಬಿಜೆಪಿಯಲ್ಲಿ ಇಲ್ಲದಿದ್ದರೂ ಆ ಪಕ್ಷ ಈಗ ಕೇಂದ್ರದಲ್ಲಿ ಆಡಳಿತ ನಡೆಸುತ್ತಿದೆ.

ದೇಶದ 19 ರಾಜ್ಯಗಳಲ್ಲಿ ಅಧಿಕಾರದಲ್ಲಿದೆ. ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಉಗ್ರಗಾಮಿ ಸಂಘಟನೆ ಎಂಬುದಕ್ಕೆ
ಮುಖ್ಯಮಂತ್ರಿಗಳ ಬಳಿ ದಾಖಲೆ ಇದ್ದರೆ ಕೇಂದ್ರ ಗೃಹ ಇಲಾಖೆಗೆ ಸಲ್ಲಿಸಲಿ ಎಂದು ಸವಾಲು ಹಾಕಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದೂಗಳನ್ನು ಎದುರು ಹಾಕಿಕೊಳ್ಳುತ್ತಿದ್ದಾರೆ. ಈ ರೀತಿ ಮಾಡಿಯೇ ಕೇಂದ್ರದಲ್ಲಿ
ಹಾಗೂ ದೇಶದ ಇನ್ನಿತರ ರಾಜ್ಯಗಳಲ್ಲಿ ಕಾಂಗ್ರೆಸ್‌ ಅಧಿಕಾರ ಕಳೆದುಕೊಂಡಿದೆ ಎಂಬುದನ್ನು ಮರೆಯಬಾರದು. ಪದೇಪದೆ ಹಿಂದೂ ಪರ ಸಂಘಟನೆಗಳನ್ನು ನಿಷೇಧಿಸುವ ಬಗ್ಗೆ ಕಾಂಗ್ರೆಸ್ಸಿಗರು ಮಾತನಾಡುತ್ತಾರೆ. ತಾಕತ್ತಿದ್ದರೆ ನಿಷೇಧಿಸಲಿ. ಆಗ ನಾವೇನೆಂಬುದನ್ನು ತೋರಿಸುತ್ತೇವೆ ಎಂದರು.

ಇಡೀ ಜಗತ್ತಿನಲ್ಲಿ ಭಯೋತ್ಪಾದಕರಿದ್ದರೆ ಅದು ಮುಸ್ಲಿàಮರು ಮಾತ್ರ. ಹಿಂದೂಗಳಾರೂ ಭಯೋತ್ಪಾದಕರಾಗಲು ಸಾಧ್ಯವೇ ಇಲ್ಲ. ಯಾರೇ ಭಯೋತ್ಪಾದಕರಾಗಿದ್ದರೂ ಅವರಿಗೆ ತಕ್ಕಪಾಠ ಕಲಿಸಲೇಬೇಕು. ಹಿಂದೂ ಭಯೋತ್ಪಾದಕ ಎಂಬ ಪದ ಹುಟ್ಟು ಹಾಕಿದ್ದೇ ಕಾಂಗ್ರೆಸ್‌ನವರು. ಕೇಂದ್ರದಲ್ಲಿ ಯುಪಿಎ ಸರ್ಕಾರವಿದ್ದಾಗಲೇ ಈ ಪದ ಆರಂಭವಾಗಿದ್ದು ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next