Advertisement

ನೇಣಿಗೆ ಶರಣಾದ ವಿದ್ಯಾರ್ಥಿನಿ

12:38 PM Aug 27, 2018 | |

ಬೆಂಗಳೂರು: “ನನ್ನ ಸಾವಿಗೆ ಯಾರೂ ಕಾರಣರಲ್ಲ’ ಎಂದು ಮೊಬೈಲ್‌ನಲ್ಲಿ ಸಂದೇಶ ಟೈಪ್‌ ಮಾಡಿದ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮಹಾರಾಣಿ ಕಾಲೇಜಿನ ಹಾಸ್ಟೆಲ್‌ನಲ್ಲಿ ನಡೆದಿದೆ.

Advertisement

ಶ್ರುತಿ (21) ಮೃತರು. ಶ್ರೀನಿವಾಸಪುರ ತಾಲೂಕಿನ ಶೃತಿ ಮೂರನೇ ವರ್ಷದ ಬಿ.ಎ ವ್ಯಾಸಾಂಗ ಮಾಡುತ್ತಿದ್ದು ಹಾಸ್ಟೆಲ್‌ನಲ್ಲಿ ಉಳಿದುಕೊಂಡಿದ್ದರು. ಭಾನುವಾರ ಬೆಳಗ್ಗೆ 9 ಗಂಟೆಯಾದರೂ ತಿಂಡಿ ತಿನ್ನಲು ಬಂದಿರಲಿಲ್ಲ. ವಾರ್ಡ್‌ನ್‌ ಕೊಠಡಿ ಬಾಗಿಲು ತಟ್ಟಿದರೂ, ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಇದರಿಂದ ಅನುಮಾನಗೊಂಡ ವಾರ್ಡನ್‌, ಹಾಸ್ಟೆಲ್‌ ಸಿಬ್ಬಂದಿ ಕರೆಸಿ ಕೊಠಡಿ  ಬಾಗಿಲು ಒಡೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ ಎಂದು ಹೈಗ್ರೌಂಡ್ಸ್‌ ಠಾಣೆ ಪೊಲೀಸರು ತಿಳಿಸಿದ್ದಾರೆ.

ವಿಷಯ ತಿಳಿದು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಶೃತಿಯ ಮೊಬೈಲ್‌ ಪತ್ತೆಯಾಗಿದ್ದು, ಮೊಬೈಲ್‌ನ ಮೆಸೇಜ್‌ ಬಾಕ್ಸ್‌ನಲ್ಲಿ “ನನ್ನ ಸಾವಿಗೆ ಯಾರೂ ಕಾರಣರಲ್ಲ. ನನ್ನ ಪೋಷಕರು ತುಂಬಾ ಒಳ್ಳೆಯವರು, ನನ್ನ ಸಾವಿನ ಬಗ್ಗೆ ಅವರನ್ನು ಏನನ್ನೂ ಕೇಳಬೇಡಿ’ ಎಂಬ ಸಂದೇಶವಿತ್ತು. ಆತ್ಮಹತ್ಯೆಗೆ ನಿಖರ ಕಾರಣ ಗೊತ್ತಾಗಿಲ್ಲ. ಸಹಪಾಠಿಗಳು, ವಾರ್ಡ್‌ನ್‌, ಪೋಷಕರ ಬಳಿ ಮಾಹಿತಿ ಪಡೆದುಕೊಳ್ಳಬೇಕಿದೆ ಎಂದು ಪೊಲೀಸರು ಹೇಳಿದ್ದಾರೆ.

ವರಮಹಾಲಕ್ಷ್ಮೀ ಹಬ್ಬಕ್ಕೆ ಊರಿಗೆ ತೆರಳದೆ ಕೊಠಡಿಯಲ್ಲಿ ಒಬ್ಬರೇ ಇದ್ದ  ಶ್ರುತಿ, ಶನಿವಾರ ರಾತ್ರಿಯೇ ನೇಣು ಬಿಗಿದುಕೊಂಡಿರುವ ಸಾಧ್ಯತೆಯಿದ್ದು, ಆಕೆಯ ಮೊಬೈಲ್‌ ವಶಕ್ಕೆ ಪಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಹ್ರೈಗ್ರೌಂಡ್ಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next