Advertisement

ನ.1ರಿಂದ ಸಲಗ ಯಶಸ್ಸು ಅಭಿಯಾನ

05:38 PM Oct 29, 2021 | Team Udayavani |

ಮೈಸೂರು: ರಾಜ್ಯಾದ್ಯಂತ ಸಲಗ ಚಿತ್ರ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದ್ದು, ಉತ್ತಮ ಪ್ರತಿಕ್ರಿಯೆ ಬಂದಿದೆ. ನ.1ರ ರಾಜ್ಯೋತ್ಸವ ದಂದು ಮೈಸೂರಿನಿಂದಲೇ ಸಲಗ ಯಶಸ್ಸು ಅಭಿಯಾನ ಆರಂಭಿ ಸುವುದಾಗಿ ನಟ, ನಿರ್ದೇಶಕ ದುನಿಯಾ ವಿಜಯ್‌ ತಿಳಿಸಿದರು.

Advertisement

ಜಿಲ್ಲಾ ಪತ್ರಕರ್ತರ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿತ್ರದಲ್ಲಿ ಮೈಸೂರಿನ ಪ್ರತಿಭೆಗಳು ನಟಿಸಿದ್ದು, ಅವರೇ ಚಿತ್ರದ ಬೆನ್ನೆಲುಬು ಎಂದು ಹೇಳಿದರು. ನ.1 ರಾಜ್ಯೋತ್ಸವ ದಿನ ಮೈಸೂರಿನ ಸಲಗ ಚಿತ್ರ ಪ್ರದರ್ಶನವಿರುವ ಚಿತ್ರಮಂದಿರಗಳಲ್ಲಿ ಇಡೀ ಚಿತ್ರ ತಂಡ ಆಗಮಿಸಿ ಜನರನ್ನು ಭೇಟಿಯಾಗಲಿದೆ. ಸಲಗ ಪಾರ್ಟ್‌ -2 ಬಗ್ಗೆ ಸದ್ಯಕ್ಕೆ ಯೋಜನೆ ರೂಪಿ ಸಿಲ್ಲ ಮುಂದೆ ನೋಡೋಣ ಎಂದರು.

ಇದನ್ನೂ ಓದಿ;- ಗೋವಾ : ಮಮತಾ ಬ್ಯಾನರ್ಜಿ ಸಮ್ಮುಖದಲ್ಲಿ ಟಿಎಂಸಿ ಸೇರ್ಪಡೆಯಾದ ಲಿಯಾಂಡರ್ ಪೇಸ್

ಚಿತ್ರದಲ್ಲಿ ಬಾಲನಟರು ಮನೋಜ್ಞವಾಗಿ ಅಭಿನಯಿಸಿದ್ದು, ಬಾಲ ಕಲಾವಿದರನ್ನು ರಂಗಾಯಣ, ನಟನದಿಂದ ಆಯ್ಕೆ ಮಾಡಿಕೊಳ್ಳಲಾಗಿದೆ. ಚಿತ್ರದಲ್ಲಿ 18 ನಿಮಿಷ ಮಕ್ಕಳೇ ಬರುತ್ತಾರೆ ಎಂದು ತಿಳಿಸಿದರು. ಭೂಗತ ಲೋಕದ ಕುರಿತು ಚಿತ್ರವಿದ್ದು, ಮಕ್ಕಳ ಬದುಕು ಹಾಳಾಗಬಾರದು, ಅಂತೆಯೇ ಮಕ್ಕಳು ರೌಡಿಸಂ ಜೀವನಕ್ಕೆ ಪ್ರೇರಣೆ ಪಡೆಯಬಾರದೆಂಬ ದೃಷ್ಟಿಕೋನದಿಂದ ಚಿತ್ರವನ್ನು ಮಾಡಿದ್ದೇನೆ.

ಭೂಗತ ಲೋಕದ ಬಗ್ಗೆ ಚಿತ್ರವಾಗಿರುವುದರಿಂದ ಚಿತ್ರಕ್ಕೆ ಎ ಪ್ರಮಾಣ ಪತ್ರ ದೊರೆತಿದೆ. ಭೂಗತ ಲೋಕದ ಚಿತ್ರ ಎಂಬ ಕಾರಣಕ್ಕಾಗಿ ಚಿತ್ರದಲ್ಲಿ ಅಶ್ಲೀಲ ಸಂಭಾಷಣೆ ಇದೆ. ಚಿತ್ರ ಮಕ್ಕಳು ಸುಳ್ಳು ಹೇಳಿ ಹೇಗೆ ದಾರಿ ತಪ್ಪುತ್ತಾರೆ ಎಂಬುದನ್ನು ಹೇಳುತ್ತದೆ ಎಂದರು. ಜೀವನದಲ್ಲಿ ತಂದೆ ತಾಯಿಯೇ ದೇವರು, ಕೊನೆಗಾಲದಲ್ಲಿ ಅವರು ಮಕ್ಕಳಂತರಾಗುತ್ತಾರೆ. ಅವರನ್ನು ಮಕ್ಕಳಂತೆ ಆರೈಕೆ ಮಾಡಬೇಕು ಎಂದು ಕೋರಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next