Advertisement

ಸಮನ್ಸ್‌ ರದ್ದುಕೋರಿ ಕೋರ್ಟ್‌ ಮೊರೆ

12:35 AM Feb 05, 2019 | Team Udayavani |

ಬೆಂಗಳೂರು: ದೆಹಲಿಯ ಫ್ಲ್ಯಾಟ್, ಮನೆ ಹಾಗೂ ಬೆಂಗಳೂರಿನ ಹಲವು ಕಡೆ 2017ರ ಆಗಸ್ಟ್‌ 2ರಂದು ನಡೆದ ಐಟಿ ದಾಳಿ ಪ್ರಕರಣ ದಲ್ಲಿ ವಿಚಾರಣೆಗೆ ಹಾಜರಾ ಗುವಂತೆ ಜಾರಿ ನಿರ್ದೇ ಶನಾಲಯ ಜಾರಿಗೊಳಿಸಿರುವ ಸಮನ್ಸ್‌ ಹಾಗೂ ಈ ಪ್ರಕರಣದ ಸಂಬಂಧ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯದಲ್ಲಿ ದಾಖಲಾಗಿರುವ ದೂರು ರದ್ದು ಗೊಳಿಸುವಂತೆ ಕೋರಿ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

Advertisement

ಜಾರಿ ನಿರ್ದೇಶನಾಲಯದ ಕ್ರಮ ಪ್ರಶ್ನಿಸಿ ಸಚಿವ ಡಿ.ಕೆ ಶಿವಕುಮಾರ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಯು ಯಾವ ನ್ಯಾಯಪೀಠದ ಮುಂದೆ ವಿಚಾರಣೆಗೆ ಬರಬೇಕು ಅನ್ನು ವುದು ಇನ್ನಷ್ಟೇ ನಿಗದಿಯಾಗಬೇಕಿದೆ.

ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಪ್ರಧಾನ ನಿರ್ದೇಶಕರು (ತನಿಖೆ) ತಮ್ಮ ವಿರುದ್ಧ ಪ್ರಾಸಿಕ್ಯೂಷನ್‌ಗೆ 2018ರ ಮೇ 28ರಂದು ನೀಡಿದ ಅನುಮತಿ ಈ ಸಂಬಂಧ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯದಲ್ಲಿ 2018ರ ಜೂ.13 ರಂದು ದಾಖಲಾದ ದೂರು, ಆ ದೂರನ್ನು ಆಧರಿಸಿ ಪ್ರಕರಣವನ್ನು ವಿಶೇಷ ನ್ಯಾಯಾ ಲಯ ಜೂ.18ರಂದು ವಿಚಾರಣೆಗೆ ಅಂಗೀಕರಿಸಿದ್ದನ್ನು ರದ್ದುಗೊಳಿಸಬೇಕು ಹಾಗೂ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ 2019ರ ಜ.17ರಂದು ಜಾರಿಗೊಳಿಸಿರುವ ಸಮನ್ಸ್‌ ಗೆ ತಡೆ ನೀಡಬೇಕೆಂದು ಅರ್ಜಿಯಲ್ಲಿ ಕೋರಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next