Advertisement

ಸುಪ್ರೀಂಕೋರ್ಟ್‌ ತೀರ್ಪು ಜಾರಿಗೆ ಆಗ್ರಹ

12:54 PM Oct 17, 2018 | |

ಬೆಂಗಳೂರು: ಶಬರಿಮಲೆ  ಪ್ರವೇಶಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪು ಜಾರಿಗೆ ಒತ್ತಾಯಿಸಿ ಮಂಗಳವಾರ ಕಮ್ಯೂನಿಸ್ಟ್‌ ಪಕ್ಷ (ಮಾರ್ಕವಾದಿ) ಕಾರ್ಯಕತರು ಮೈಸೂರು ಬ್ಯಾಂಕ್‌ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

Advertisement

ಪಕ್ಷದ ಕಾರ್ಯದರ್ಶಿ ಆರ್‌.ಶ್ರೀನಿವಾಸ್‌ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಮಹಿಳೆಯರು ಶಬರಿಮಲೆ ಪ್ರವೇಶಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಉತ್ತಮವಾದ ತೀರ್ಪು ನೀಡಿದ್ದು, ಕೇರಳ ಸರ್ಕಾರ ಈ ತೀರ್ಪು ಜಾರಿಗೆ ಮುಂದಾಗಬೇಕು ಎಂದು ಒತ್ತಾಯಿಸಿದರು.

ಈ ವೇಳೆ ಮಾತನಾಡಿದ ಆರ್‌.ಶ್ರೀನಿವಾಸ್‌, ಕಾನೂನಿನ ಮುಂದೆ ಎಲ್ಲರೂ ಒಂದೇ. ಹೀಗಾಗಿ ಕೇರಳ ಸರ್ಕಾರ ನ್ಯಾಯಾಲಯ ನೀಡಿರುವ ತೀರ್ಪಿನ ಜಾರಿಗೆ ಕೂಡಲೇ ಮುಂದಾಗಬೇಕು.ಕೆಲವರು ಈ ಸಂಬಂಧ ಅಪಸ್ವರ ಎತ್ತಿದ್ದು ಅಂತವರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಬೇಕು.ಅಲ್ಲದೆ ದೇವಸ್ಥಾನಕ್ಕೆ ಹೋಗುವ ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡಲು ಮುಂದಾಗಬೇಕು ಎಂದು ಆಗ್ರಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next