Advertisement

ಪ್ರವಾದಿ ಚರ್ಚೆ: ಬಂಧನ ಭೀತಿಯಿಂದ ನಾವಿಕಾ ಕುಮಾರ್ ಪಾರು

04:16 PM Aug 08, 2022 | Team Udayavani |

ನವದೆಹಲಿ : ಟಿವಿ ಚರ್ಚೆಯಲ್ಲಿ ಪ್ರವಾದಿ ಮೊಹಮದ್ ಕುರಿತಾಗಿ ವಿವಾದ ಉಂಟಾದ ಹಿನ್ನೆಲೆಯಲ್ಲಿ ನಾವಿಕಾ ಕುಮಾರ್‌ ವಿರುದ್ಧ ದಾಖಲಿಸಲಾದ ಎಫ್‌ಐಆರ್‌ಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಿದೆ.

Advertisement

ಪ್ರವಾದಿ ಮೊಹಮ್ಮದ್ ಕುರಿತು ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರು ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಕ್ಕಾಗಿ, ಕಾರ್ಯಕ್ರಮ ನಿರೂಪಕಿ ನಾವಿಕಾ ಕುಮಾರ್‌ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿತ್ತು.ಅವುಗಳನ್ನು ರದ್ದುಗೊಳಿಸುವಂತೆ ನಾವಿಕಾ ಕುಮಾರ್ ಮನವಿ ಮಾಡಿದ್ದರು.

ನ್ಯಾಯಮೂರ್ತಿಗಳಾದ ಕೃಷ್ಣ ಮು                             ರಾರಿ ಮತ್ತು ಹಿಮಾ ಕೊಹ್ಲಿ ಅವರ ಪೀಠವು ಕೇಂದ್ರ, ಪಶ್ಚಿಮ ಬಂಗಾಳ ಸರಕಾರ ಮತ್ತು ಇತರರಿಗೆ ನೋಟಿಸ್ ಜಾರಿ ಮಾಡಿದ್ದು, ಕುಮಾರ್ ಅವರ ವಿರುದ್ಧ ಆರಂಭಿಸಿರುವ ಪ್ರಕ್ರಿಯೆಗಳನ್ನು ರದ್ದುಗೊಳಿಸುವಂತೆ ಕೋರಿದೆ.

ನೂಪುರ್ ಶರ್ಮಾ ಅವರ ಹೇಳಿಕೆ ಭಾರಿ ವಿವಾದ ಸೃಷ್ಟಿಸಿ ದೇಶದೆಲ್ಲೆಡೆ ಪ್ರತಿಭಟನೆಗಳಿಗೆ ಕಾರಣವಾಗಿತ್ತು, ಗಲ್ಫ್ ರಾಷ್ಟ್ರಗಳಿಂದಲೂ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಬಿಜೆಪಿ ಅವರನ್ನು ಪಕ್ಷದಿಂದ ಅಮಾನತು ಮಾಡಿತ್ತು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next