Advertisement

Madrasa ರದ್ದುಗೊಳಿಸಿದ್ದ ಹೈಕೋರ್ಟ್‌ ತೀರ್ಪಿಗೆ ಸುಪ್ರೀಂ ಕೋರ್ಟ್‌ ತಡೆ

01:04 AM Apr 06, 2024 | Team Udayavani |

ಹೊಸದಿಲ್ಲಿ: 2004ರ ಉ.ಪ್ರ. ಮದ್ರಸಾ ಶಿಕ್ಷಣ ಮಂಡಳಿ ಕಾಯ್ದೆ’ ಅಸಾಂವಿಧಾನಿಕ ಎಂದು ಹೇಳಿದ್ದ ಅಲಹಾಬಾದ್‌ ಹೈಕೋರ್ಟ್‌ ತೀರ್ಪಿಗೆ ಸುಪ್ರೀಂ ಕೋರ್ಟ್‌ ಶುಕ್ರವಾರ ಮಧ್ಯಾಂತರ ತಡೆ ನೀಡಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ನೇತೃತ್ವದ 3 ನ್ಯಾಯಮೂರ್ತಿಗಳ ಪೀಠವು ಅರ್ಜಿಯ ವಿಚಾರಣೆ ನಡೆಸಿ, ಮದ್ರಸಾ ಮಂಡಳಿಯ ಉದ್ದೇಶ ಮತ್ತು ಧ್ಯೇಯಗಳು ಸ್ವರೂಪದಲ್ಲಿ ನಿಯಂತ್ರಕಗಳಾಗಿವೆ. ಇದು ಜಾತ್ಯತೀತ ತಣ್ತೀವನ್ನು ಉಲ್ಲಂಘನೆ ಮಾಡುತ್ತದೆ ಎಂಬ ಹೈಕೋರ್ಟ್‌ನ ತೀರ್ಪು ಸರಿಯಲ್ಲ ಎಂದು ಹೇಳಿದೆ.

Advertisement

ಜತೆಗೆ, ಈ ಕುರಿತು ಪ್ರತಿಕ್ರಿಯಿಸಲು ಸುಪ್ರೀಂ ಕೋರ್ಟ್‌ ಉತ್ತರ ಪ್ರದೇಶ ಸರಕಾರ, ಕೇಂದ್ರ ಸರಕಾರ ಮತ್ತು ಮಂಡಳಿಗೆ ನೋಟಿಸ್‌ ಜಾರಿ ಮಾಡಿದೆ. ಅಂತಿಮ ವಿಚಾರಣೆಯನ್ನು ಜುಲೈ 2ನೇ ವಾರದಲ್ಲಿ ನಡೆಸುವುದಾಗಿ ತಿಳಿಸಿದೆ.
2004ರ ಉತ್ತರ ಪ್ರದೇಶ ಮದ್ರಸಾ ಶಿಕ್ಷಣ ಮಂಡಳಿ ಕಾಯ್ದೆಯು ಅಸಾಂವಿಧಾನಿಕ ಮತ್ತು ಜಾತ್ಯತೀತ ತತ್ವಗಳನ್ನು ಉಲ್ಲಂಘನೆ ಮಾಡುತ್ತದೆ ಎಂದು ಅಲಹಾಬಾದ್‌ ಹೈಕೋರ್ಟ್‌ ಇತ್ತೀಚೆಗಷ್ಟೇ ತೀರ್ಪು ನೀಡಿತ್ತು. ಈ ತೀರ್ಪನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next