Advertisement

ಮಳಲಿ ಮಸೀದಿಯ ಸರ್ವೇ ನಡೆಯಬೇಕು, ಜನರು ಸತ್ಯ ತಿಳಿಯಲಿ: ಡಾ ಸುರೇಂದ್ರ ಕುಮಾರ್ ಜೈನ್

10:22 AM May 26, 2022 | Team Udayavani |

ಮಂಗಳೂರು: ಮಳಲಿಯಲ್ಲಿ ಮಂದಿರವನ್ನು ಕೆಡವಿ ಮಸೀದಿ ನಿರ್ಮಾಣ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಅದಕ್ಕೆ ಇದೀಗ ಪುರಾವೆಗಳೂ ಸಿಕ್ಕಿವೆ. ಹೀಗಾಗಿ ಮಂಗಳೂರಿನ ಜಾಮಾ ಮಸೀದಿಯಲ್ಲಿ ನ್ಯಾಯಾಂಗದ ಮೇಲ್ವಿಚಾರಣೆಯಲ್ಲಿ ಸರ್ವೇ ನಡೆಯಬೇಕು. ಸಾರ್ವಜನಿಕರಿಗೆ ವಾಸ್ತವಾಂಶ ತಿಳಿಯಬೇಕು ಎಂದು ವಿಶ್ವ ಹಿಂದೂ ಪರಿಷತ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಾ. ಸುರೇಂದ್ರ ಕುಮಾರ್ ಜೈನ್ ಒತ್ತಾಯಿಸಿದ್ದಾರೆ.

Advertisement

ಈ ಬಗ್ಗೆ ವಿಡಿಯೋದಲ್ಲಿ ಮಾತನಾಡಿರುವ ಅವರು, ಮಂಗಳೂರಿನ ಮಸೀದಿ ಜಾಗದಲ್ಲಿ ಮಂದಿರವಿದ್ದ ಬಗ್ಗೆ ಇದೀಗ ತಿಳಿದು ಬಂದಿದೆ. ಅಲ್ಲಿ ಮೊದಲಿದ್ದ ಮಂದಿರವನ್ನು ಕೆಡವಿ ಮಸೀದಿ ನಿರ್ಮಾಣ ಮಾಡಲಾಗಿದೆ ಎನ್ನುವುದಕ್ಕೆ ಸಾಕ್ಷಿಯೂ ದೊರೆತಿದೆ ಎಂದಿದ್ದಾರೆ.

ಈ ವಿಚಾರದಲ್ಲಿ ಮುಸ್ಲಿಮರು ಸದ್ಭಾವನೆ ತೋರಿಸಬೇಕು. ಅಲ್ಲಿ ಮಂದಿರವಿತ್ತು, ಅದನ್ನು ಧ್ವಂಸ ಮಾಡಿ ಮಸೀದಿ ಮಾಡಲಾಗಿತ್ತು. ನಾವೀಗ ಮಂದಿರವನ್ನು ಹಿಂದೂ ಸಮಾಜದ ಉಸ್ತುವಾರಿಗೆ ನೀಡುತ್ತೇವೆ ಎಂದು ಅವರು ಮುಂದೆ ಬರಬೇಕಿದೆ. ಈ ಮೂಲಕ ಪ್ರಪಂಚಕ್ಕೆ ಒಂದು ಉದಾಹರಣೆಯಾಗಿ ನಿಲ್ಲಬೇಕು ಎಂದು ವಿಶ್ವ ಹಿಂದೂ ಪರಿಷತ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಾ. ಸುರೇಂದ್ರ ಕುಮಾರ್ ಜೈನ್ ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next