Advertisement

ಜಿಲ್ಲೆಯಲ್ಲಿ 20 ಲಕ್ಷ ಗಿಡ ನೆಡುವ ಗುರಿ: ಡಾ|ಜಯಮಾಲಾ

10:27 PM Jun 11, 2019 | sudhir |

ಬ್ರಹ್ಮಾವರ: ಪರಿಸರ ಸಂರಕ್ಷಣೆಯ ಉದ್ದೇಶದಿಂದ ಜಿಲ್ಲೆಯಲ್ಲಿ ಈ ವರ್ಷ 20 ಲಕ್ಷ ಗಿಡ ನೆಡುವ ಗುರಿ ಹೊಂದಲಾಗಿದೆ ಎಂದು ಸಚಿವೆ ಡಾ| ಜಯಮಾಲಾ ಹೇಳಿದರು.

Advertisement

ಮಂಗಳವಾರ ಬ್ರಹ್ಮಾವರ ಬಂಟರ ಭವನದಲ್ಲಿ ಜಿಲ್ಲಾಡಳಿತ, ಜಿ.ಪಂ., ತಾ.ಪಂ. ಉಡುಪಿ, ವಾರಂಬಳ್ಳಿ ಗ್ರಾ.ಪಂ.ನ ಸಹಯೋಗದಲ್ಲಿ ನಡೆದ ಸ್ವತ್ಛಮೇವ ಜಯತೇ ಮತ್ತು ಜಲಾಮೃತ ಆಂದೋಲನ 2019 ಉದ್ಘಾಟಿಸಿ ಅವರು ಮಾತನಾಡಿದರು.

ಮನುಕುಲದ ಉಳಿವಿಗಾಗಿ, ಪ್ರಾಣಿ ಪಕ್ಷಿ ಸಂಕುಲ, ಜಲಚರಗಳ ಉಳಿವಿಗಾಗಿ ಪರಿಸರ ಸಂರಕ್ಷಿಸಬೇಕಿದೆ. ಪರಿಸರ ಸಂರÒಕಣೆಯ ಕಾರ್ಯದಲ್ಲಿ ಪ್ರತಿಯೊಬ್ಬ ನಾಗರಿಕರು ಕೈ ಜೋಡಿಸಬೇಕಾಗಿದೆ ಎಂದರು.

ಮಳೆ ನೀರು ಸಂರಕ್ಷಣೆ
ಪ್ರಸ್ತುತ ಇರುವ ಜಲ ಮೂಲ ಸಂರಕ್ಷಿಸಿಕೊಂಡು ನೀರಿನ ಸದ್ಬಳಕೆ ನಡೆಯಬೇಕು. ಎಲ್ಲ ಸರಕಾರಿ ಕಚೇರಿಗಳು ಮತ್ತು ಖಾಸಗಿ ಕಟ್ಟಡ, ಮನೆಗಳಲ್ಲಿ ಸಹ ಮಳೆನೀರು ಕೊಯ್ಲು ವ್ಯವಸ್ಥೆ ಅಳವಡಿಸಿಕೊಳ್ಳುವುದರಿಂದ ನೀರಿನ ಕೊರತೆ ತಪ್ಪಿಸಬಹುದು. ಸಾರ್ವಜನಿಕರಲ್ಲಿ ಜಲ ಸಂರಕ್ಷಣೆ, ನೀರಿನ ಸದ್ಬಳಕೆ, ಹಸುರೀಕರಣದ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಡಾ| ಜಯಮಾಲಾ ಹೇಳಿದರು.

ಸ್ವತ್ಛತೆ ಮುಖ್ಯ
ಸ್ವತ್ಛತೆ ಇದ್ದರೆ ರೋಗ ಬರುವುದಿಲ್ಲ. ಸ್ವತ್ಛತೆಯಿಂದ ಆರೋಗ್ಯಯುತ ಸಮಾಜ ನಿರ್ಮಾಣ ಸಾಧ್ಯ. ಆದ್ದರಿಂದ ಮನೆಯಿಂದ ಆರಂಭಗೊಂಡು ಎಲ್ಲೆಡೆ ಸ್ವತ್ಛತೆಗೆ ಆದ್ಯತೆ ನೀಡುವಂತೆ ತಿಳಿಸಿದ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯಲ್ಲಿ ನಡೆಯುತ್ತಿರುವ ತ್ಯಾಜ್ಯ ವಿಲೇವಾರಿ ಕಾರ್ಯಕ್ರಮದಲ್ಲಿ ಎಸ್‌.ಎಲ್‌.ಆರ್‌.ಎಂ. ಘಟಕದ ಸದಸ್ಯರು ನಿರ್ವಸುತ್ತಿರುವ ಕಾರ್ಯವನ್ನು ಶ್ಲಾಘಿಸಿದರು.

Advertisement

ನೀರಿನ ಅರಿವು
ಪ್ರಾಸ್ತಾವಿಕವಾಗಿ ಮಾತನಾಡಿದ ಜಿ.ಪಂ. ಮುಖ್ಯ ಯೋಜನಾ ಧಿಕಾರಿ ಶ್ರೀನಿವಾಸ ರಾವ್‌ ಜಿಲ್ಲೆಯಲ್ಲಿ ನೀರಿನ ಮಹತ್ವ ಕುರಿತು ಅರಿವು ಮೂಡಿಸಿ, ಸಾರ್ವಜನಿಕರನ್ನು ಜಲಸಾಕ್ಷರರನ್ನಾಗಿ ಮಾಡುವ ಉದ್ದೇಶ ಹೊಂದಿದೆ. ಪ್ರತಿ ಗ್ರಾ.ಪಂ.ನಲ್ಲಿ 500 ಗಿಡ ನೆಡಲಾಗುವುದು, ಸ್ವತ್ಛತೆಯ ಕುರಿತಂತೆ ಅರಿವು ಮೂಡಿಸಲು ಜಿಲ್ಲೆಯಾದ್ಯಂತ ಸ್ವತ್ಛತಾ ರಥ ಸಂಚರಿಸಲಿದೆ. ಜಿಲ್ಲೆಯ ಎಲ್ಲ ಶಾಲೆಗಳಲ್ಲಿ ಸ್ವತ್ಛತೆಯ ಕುರಿತಂತೆ ಅರಿವು ಮೂಡಿಸಲು 150 ಮಂದಿ ಗೈಡ್‌ಗಳಿಗೆ ತರಬೇತಿ ನೀಡಿದ್ದು, ಒಂದು ತಿಂಗಳ ಕಾಲ ನಿರಂತರ ಕಾರ್ಯಕ್ರಮ ನಡೆಯಲಿದ್ದು, ವಿಶೇಷ ಗ್ರಾಮ ಸಭೆ ಸಹ ನಡೆಯಲಿದೆ ಎಂದರು.

ಕಸದಿಂದ ರಸ
ಜಿಲ್ಲೆಯಲ್ಲಿ ಎಸ್‌.ಎಲ್‌.ಆರ್‌.ಎಂ. ಘಟಕ ಆರಂಭವಾದಾಗಿನಿಂದ ಇದುವರೆವಿಗೆ 2.5 ಸಾವಿರ ಟನ್‌ ಒಣ ತ್ಯಾಜ್ಯ ಮತ್ತು 3.5 ಸಾವಿರ ಟನ್‌ ಹಸಿ ತ್ಯಾಜ್ಯ ಸಂಗ್ರಹಿಸಿದ್ದು, ಗ್ರಾ.ಪಂ.ಗಳಿಗೆ 35ರಿಂದ 40 ಲಕ್ಷ ರೂ. ಆದಾಯ ದೊರೆತಿದೆ. ರಾಜ್ಯಕ್ಕೆ ಇದು ಮಾದರಿ ಅನುಷ್ಠಾನ ಕಾರ್ಯಕ್ರಮವಾಗಿದೆ ಎಂದು ಶ್ರೀನಿವಾಸ ರಾವ್‌ ಹೇಳಿದರು.

ಜಿ.ಪಂ. ಅಧ್ಯಕ್ಷ ದಿನಕರ ಬಾಬು ಸ್ವತ್ಛತಾ ರಥಕ್ಕೆ ಚಾಲನೆ ನೀಡಿದರು. ಉಪಾಧ್ಯಕ್ಷೆ ಶೀಲಾ ಶೆಟ್ಟಿ ಹಸುರೀಕರಣಕ್ಕೆ ಚಾಲನೆ ನೀಡಿದರು. ತಾ.ಪಂ. ಅಧ್ಯಕ್ಷೆ ನಳಿನಿ ಪ್ರದೀಪ್‌ ರಾವ್‌ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಿದರು.

ಕಾರ್ಯಕ್ರಮದಲ್ಲಿ ಜಿ.ಪಂ. ಸದಸ್ಯರಾದ ಜನಾರ್ದನ ತೋನ್ಸೆ, ಮೈರ್ಮಾಡಿ ಸುಧಾಕರ ಶೆಟ್ಟಿ, ಶಿಲ್ಪಾ ಸುವರ್ಣ, ವಾರಂಬಳ್ಳಿ ಗ್ರಾ.ಪಂ. ಅಧ್ಯಕ್ಷ ನವೀನ್‌ಚಂದ್ರ ನಾಯಕ್‌, ಉಪಾಧ್ಯಕ್ಷೆ ಗಾಯತ್ರಿ, ತಾ.ಪಂ. ಸದಸ್ಯೆ ಕುಸುಮಾ ಪೂಜಾರ್ತಿ, ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ, ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿ ಕಾರಿ ಸಿಂಧೂ ಬಿ. ರೂಪೇಶ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನಿಶಾ ಜೇಮ್ಸ್‌, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಕೆ. ರಾಜು , ಜಿ.ಪಂ. ಉಪ ಕಾರ್ಯದರ್ಶಿ ನಾಗೇಶ್‌ ರಾಯ್ಕರ್‌, ಸಿಡಿಪಿಓ ವೀಣಾ ಮೊದಲಾದವರು ಉಪಸ್ಥಿತರಿದ್ದರು.

ಪ.ಪಂ.ಗೆ ಮನವಿ
ತ್ಯಾಜ್ಯ ವಿಲೇವಾರಿ, ಒಳಚರಂಡಿ ವ್ಯವಸ್ಥೆ, ಅಭಿವೃದ್ಧಿ ದೃಷ್ಟಿಯಿಂದ ಬ್ರಹ್ಮಾವರ ನಗರದ ಗ್ರಾ.ಪಂ.ಗಳನ್ನು ಸೇರಿಸಿ ಪಟ್ಟಣ ಪಂಚಾಯತ್‌ ರಚಿಸುವಂತೆ ಪಂಚಾಯತ್‌ ಸದಸ್ಯ ರಾಜೇಶ್‌ ಶೆಟ್ಟಿ ಬಿರ್ತಿ ಮನವಿ ಮಾಡಿದರು.

ವಾರಂಬಳ್ಳಿ ಗ್ರಾ.ಪಂ. ಸದಸ್ಯ ರಾಜೇಶ್‌ ಶೆಟ್ಟಿ ಬಿರ್ತಿ ಸ್ವಾಗತಿಸಿ, ಪಿಡಿಓ ಮಹೇಶ್‌ ಕಾರ್ಯಕ್ರಮ ನಿರೂಪಿಸಿದರು.

ಹಲವು ಯೋಜನೆ
ಪರಿಸರ ಸಂರಕ್ಷಣೆ, ಜಲ ಸಂರಕ್ಷಣೆ ಉದ್ದೇಶದಿಂದ ರಾಜ್ಯದಲ್ಲಿ 20,000 ಚೆಕ್‌ ಡ್ಯಾಂಗಳ ನಿರ್ಮಣ, 14,000 ಕೆರೆ, ಕಟ್ಟೆ , ಕಲ್ಯಾಣಿ, ಗೋ ಕಟ್ಟೆಗಳ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳಲಾಗಿದೆ. ಬಾವಿ, ಕೆರೆ ಮುಂತಾದ ಎಲ್ಲ ಬಗೆಯ ಜಲ ಮೂಲಗಳ ಹೂಳು ತೆಗೆಯುವ ಬಗ್ಗೆ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಡಾ| ಜಯಮಾಲಾ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next