Advertisement

ಕೋಟಿಗೊಬ್ಬ-3 ಪ್ರದರ್ಶನ ರದ್ದು: ವಿಜಯಪುರದಲ್ಲಿ ಚಿತ್ರಮಂದಿರ ಧ್ವಂಸ

04:15 PM Oct 14, 2021 | Team Udayavani |

ವಿಜಯಪುರ: ಕನ್ನಡ ಚಿತ್ರರಂಗದ ಖ್ಯಾತನಟ ಸುದೀಪ್ ಅಭಿನಯದ ಕೋಟಿಗೊಬ್ಬ-3 ಗುರುವಾರ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ರೊಚ್ಚಿಗೆದ್ದ ಅಭಿಮಾನಿಗಳು ನಗರದಲ್ಲಿರುವ ಚಿತ್ರಮಂದಿರ ದ್ವಂಸ ಮಾಡಿದ್ದಾರೆ.

Advertisement

ನಗರದ ಟಿಪ್ಪು ಸುಲ್ತಾನ್ ವೃತ್ತದಲ್ಲಿರುವ ಡ್ರೀಮ್ ಲ್ಯಾಂಡ್ ಚಿತ್ರಮಂದಿರದಲ್ಲಿ ಕೋಟಿಗೊಬ್ಬ-3 ಬಿಡುಗಡೆಗೆ ಪೋಸ್ಟರ್ ಅಂಟಿಸಲಾಗಿತ್ತು. ಹೀಗಾಗಿ ಬುಧವಾರ ರಾತ್ರಿಯಿಂದಲೇ ಟಿಕೆಟ್ ಗಾಗಿ ಸುದೀಪ್ ಅಭಿಮಾನಿಗಳು ಜಮಾಯಿಸಿದ್ದರು. ಆದರೆ, ಕಾರಣಾಂತರಗಳಿಂದ ಕೋಟಿಗೊಬ್ಬಚಿತ್ರ ಬಿಡುಗಡೆ ಆಗುತ್ತಿಲ್ಲ ಎಂಬ ಸುದ್ದಿಬಂತು. ಇದರಿಂದ ರೊಚ್ಚಿಗೆದ್ದ ಅಭಿಮಾನಿಗಳು ಕಲ್ಲು ತೂರಾಟ ಆರಂಭಿಸಿದರು. ಅಲ್ಲದೇ ಡ್ರೀಮ್ ಲ್ಯಾಂಡ್ ಚಿತ್ರಮಂದಿರದ ಗಾಜು, ಕುರ್ಚಿಗಳನ್ನು ಧ್ವಂಸ ಗೊಳಿಸಿದರು.

ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಗಾಂಧಿ ಚೌಕ್ ಠಾಣೆ ಪೊಲೀಸರು ಲಾಠಿ ರುಚಿ ತೋರಿಸುವ ಮೂಲಕ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಯತ್ನಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next