Advertisement

ಕೆರೆಯಲ್ಲಿ ಮುಳುಗಿ ಮೂವರು ಬಾಲಕರು ಸಾವು

10:11 AM May 27, 2022 | Team Udayavani |

ಬೆಂಗಳೂರು: ಈಜಲು ಹೋಗಿದ್ದ ಮೂವರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಕೊತ್ತನೂರು ಪೊಲೀಸ್‌ ಠಾಣಾ ವ್ಯಾಪ್ತಿಯ ದೊಡ್ಡ ಗುಬ್ಬಿ ಕೆರೆಯಲ್ಲಿ ಗುರುವಾರ ನಡೆದಿದೆ.

Advertisement

ಸಾರಾಯಿಪಾಳ್ಯದ ಇಮ್ರಾನ್‌ ಪಾಷಾ (17), ಮುಬಾರಕ್‌(17) ಮತ್ತು ಶಾಹೀದ್‌ (16) ಮೃತ ಯುವಕರು. ಅಬ್ದುಲ್‌ ರೆಹಮಾನ್‌ ಮತ್ತು ಶಾಹೀಲ್‌ ಎಂಬವರು ರಕ್ಷಣೆಗೊಳಗಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ರಾತ್ರಿವರೆಗೂ ಕಾರ್ಯಾಚರಣೆ ನಡೆಸಿ ಸ್ಥಗಿತಗೊಳಿಸಿದ್ದರು. ಶುಕ್ರವಾರ ಮುಂಜಾನೆಯೇ ಮೃತದೇಹಗಳಿಗೆ ಶೋಧ ಕಾರ್ಯ ಮಂದುವರಿಸಿದ್ದಾರೆ.

ಇದನ್ನೂ ಓದಿ:ಟ್ಯಾಂಕರ್‌ ಹರಿದು ನೇಪಾಳ ಮೂಲದ ಮಗು ಸಾವು

ಸಾರಾಯಿಪಾಳ್ಯದಿಂದ ಮಧ್ಯಾಹ್ನ 1 ಗಂಟೆಗೆ ದೊಡ್ಡಗುಬ್ಬಿ ಕೆರೆಗೆ ಈಜಲು ಬಂದಾಗ ಘಟನೆ ನಡೆದಿದೆ. ಮೃತ ಇಮ್ರಾನ್‌ ಕಳೆದ ವಾರ ಇದೇ ಕೆರೆಯಲ್ಲಿ ಈಜಾಡಲು ಬಂದಿದ್ದ. ಅದನ್ನು ತನ್ನ ಇನ್‌ಸ್ಟ್ರಾಗ್ರಾಂ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದ. ಹೀಗಾಗಿ ಗುರುವಾರ ಬಾಡಿಗೆ ಆಟೋದಲ್ಲಿ ತನ್ನ ನಾಲ್ವರು ಸ್ನೇಹಿತರನ್ನು ಇಲ್ಲಿಗೆ ಕರೆದುಕೊಂಡು ಬಂದಿದ್ದಾನೆ. ಮುಬಾರಕ್‌, ಶಾಹೀದ್‌ಗೆ ಈಜು ಬರದಿದ್ದರೂ ಇಮ್ರಾನ್‌ ಬಲವಂತವಾಗಿ ನೀರಿಗಿಳಿಯುವಂತೆ ಮಾಡಿದ್ದಾನೆ. ನಂತರ ಈಜಾಡಲು ಸಾಧ್ಯವಾಗದೆ ಮೂವರು ನೀರಿನಲ್ಲಿ ಮುಳುಗಿದ್ದಾರೆ. ದಡದಲ್ಲಿದ್ದ ಶಾಹೀಲ್‌ ಹಾಗೂ ಅಬ್ದುಲ್‌ ಪೋಷಕರಿಗೆ ಹಾಗೂ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next