Advertisement

ಅನರ್ಹರಿಗೆ ಟಿಕೆಟ್‌ ವರಿಷ್ಠರಿಗೆ ಬಿಟ್ಟಿದ್ದು

11:24 PM Nov 03, 2019 | Team Udayavani |

ಹುಬ್ಬಳ್ಳಿ: ಅನರ್ಹ ಶಾಸಕರು ವೈಯಕ್ತಿಕ ಕಾರಣಗಳಿಂದ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆ ಯಿಂದಲೇ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಅವರಿಗೆ ಟಿಕೆಟ್‌ ಕೊಡುವುದು ಹೈಕ ಮಾಂಡ್‌ಗೆ ಬಿಟ್ಟಿದ್ದು ಎಂದು ಬೃಹತ್‌ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಅನರ್ಹ ಶಾಸಕರು ಈಗಾಗಲೇ ಸುಪ್ರೀಂಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಿದ್ದು, ಪರ- ವಿರೋಧ ವಾದಗಳಾಗಿವೆ.

Advertisement

ತೀರ್ಪು ಮಾತ್ರ ಬಾಕಿ ಇದೆ. ತೀರ್ಪು ಬಂದ ನಂತರ ಅವರು ತೆಗೆದುಕೊಳ್ಳುವ ನಿರ್ಧಾರ ಹಾಗೂ ಪಕ್ಷಕ್ಕೆ ಸೇರ್ಪಡೆಗೊಂಡರೆ ಅವರಿಗೆ ಟಿಕೆಟ್‌ ನೀಡುವ ಕುರಿತು ಪಕ್ಷದ ಹೈಕಮಾಂಡ್‌ ನಿರ್ಧಾರ ಕೈಗೊಳ್ಳಲಿದೆ. ಸಿಎಂ ಯಡಿಯೂರಪ್ಪ ಅವರು ಅನರ್ಹರಿಗೆ ಟಿಕೆಟ್‌ ನೀಡುತ್ತೇವೆಂದು ಹೇಳಿಕೆ ನೀಡಿರುವ ಕುರಿತು ನನಗೆ ಮಾಹಿತಿ ಇಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next