Advertisement

MLA ಕರೆದುಕೊಂಡು ಪ್ರವಾಸ ಹೋಗುವ ಕಾಲ ಬಂದೇ ಬರುತ್ತದೆ: ಸತೀಶ

01:09 AM Nov 27, 2023 | Team Udayavani |

ಬೆಳಗಾವಿ: ಈಗ ಖಾಸಗಿಯಾಗಿ ವಿದೇಶ ಪ್ರವಾಸಕ್ಕೆ ಹೋಗಿದ್ದೆ. ಮುಂದೆ ಸಮಯ ಬಂದಾಗ ಹಾಲಿ ಶಾಸಕರು ಮತ್ತು ಮಾಜಿ ಶಾಸಕರನ್ನು ಕರೆದುಕೊಂಡು ಹೋಗುತ್ತೇನೆ. ಮುಂದೊಂದು ದಿನ ಅಂಥ ಸಮಯ ಬಂದೇ ಬರುತ್ತದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

Advertisement

ವಿಲೀನಕ್ಕೂ ಗ್ಯಾರಂಟಿಗೂ ಸಂಬಂಧವಿಲ್ಲ
ರೇಷ್ಮೆ ಇಲಾಖೆಯನ್ನು ಕೃಷಿ ಇಲಾಖೆಯೊಂದಿಗೆ ವಿಲೀನಗೊಳಿಸುವ ಪ್ರಕ್ರಿಯೆ 10 ವರ್ಷ ಹಿಂದೆಯೇ ನಡೆದಿದೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ಅನುದಾನ ಕೊರತೆಯಾಗಿದ್ದಕ್ಕೆ ಇವುಗಳನ್ನು ವಿಲೀನಗೊಳಿಸಲು ಸರಕಾರ ಮುಂದಾಗಿದೆ ಎಂಬುದು ತಪ್ಪು. ಕೆಲವು ಇಲಾಖೆಗಳು ಪ್ರತ್ಯೇಕವಾಗಿ ಕಾರ್ಯನಿರ್ವಹಿಸುವ ಅಗತ್ಯ ಇಲ್ಲದ ಕಾರಣ ವಿಲೀನಕ್ಕೆ ವರದಿ ಸಲ್ಲಿಕೆಯಾಗಿದೆ. ಈ ರೀತಿ ಹಿಂದಿನ ಸರಕಾರಗಳಲ್ಲೂ ವಿಲೀನ ಪ್ರಕ್ರಿಯೆ ನಡೆದಿವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next