Advertisement

ಅಂಗಡಿ, ಬೇಕರಿ, ಬಸ್ ತಂಗುದಾಣಕ್ಕೆ ಢಿಕ್ಕಿಯಾಗಿ ಹೋಟೆಲ್ ನುಗ್ಗಿದ ಟೋಯಿಂಗ್ ಲಾರಿ

10:02 AM May 06, 2022 | Team Udayavani |

ವಿಟ್ಲ: ಟೋಯಿಂಗ್ ಲಾರಿಯೊಂದು ಬಸ್ ತಂಗುದಾಣ, ಅಂಗಡಿಗಳಿಗೆ ಢಿಕ್ಕಿ ಹೊಡೆದು ಬಳಿಕ ಹೋಟೆಲ್ ಗೆ ನುಗ್ಗಿದ ಪರಿಣಾಮ ಚಾಲಕ ಗಂಭೀರ ಗಾಯಗೊಂಡ ಘಟನೆ ಬಂಟ್ವಾಳದ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆ ಎಂಬಲ್ಲಿ ಸಂಭವಿಸಿದೆ.

Advertisement

ಪುತ್ತೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ಕಳೆದು ಕೊಡಾಜೆ ಜಂಕ್ಷನ್ ನಲ್ಲಿ ನಂದಿನಿ ಹಾಲಿನ ಅಂಗಡಿ, ಬೇಕರಿ, ಬಸ್ ತಂಗುದಾಣ, ಮೊಬೈಲ್ ಅಂಗಡಿ ಮಹಡಿಗೆ ಢಿಕ್ಕಿ ಹೊಡೆದು ಹೋಟೆಲ್ ಗೆ ನುಗ್ಗಿದೆ.

ಘಟನೆಯಿಂದ ಚಾಲಕ ಗಂಭೀರ ಗಾಯಗೊಂಡಿದ್ದು, ಕೂಡಲೇ ಆತನನ್ನು ಮಂಗಳೂರು ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ.  ಶಿರಸಿ ಮೂಲದ ಲಾರಿ ಎಂದು ತಿಳಿದು ಬಂದಿದೆ‌.

ಇದನ್ನೂ ಓದಿ:ರಾಜಕಾರಣಿಗಳ ಪರಿಚಯವಿದೆ ಎಂದು ನಂಬಿಸಿ 36 ಲಕ್ಷ ರೂ. ಪಂಗನಾಮ ಹಾಕಿದ ಮಹಿಳೆ

Advertisement

ಹಗಲು ಇಲ್ಲಿ ಹೆಚ್ಚಿನ ಜನ ಸಂದಣಿ ಕಾಣುತ್ತಿದ್ದು, ರಾತ್ರಿ 1 ಗಂಟೆ ಅಂದಾಜಿಗೆ ಈ ಘಟನೆ ಸಂಭವಿಸಿದ್ದರಿಂದ ಭಾರಿ ಅನಾಹುತ ತಪ್ಪಿದೆ. ಘಟನೆಯಿಂದ ಅಂಗಡಿಗಳಿಗೆ ಹಾನಿ ಸಂಭವಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next