Advertisement

Kanahosahalli: ಈಜಲು ತೆರಳಿದ್ದ ಮೂವರು ಬಾಲಕರ ದಾರುಣ ಸಾವು

06:49 PM Oct 08, 2024 | Team Udayavani |

ಕಾನಾಹೊಸಹಳ್ಳಿ (ವಿಜಯನಗರ): ಕೂಡ್ಲಿಗಿ ತಾಲೂಕಿನ ಕಾನಾಹೊಸಹಳ್ಳಿ ಸಮೀಪ ಕುಮತಿ ಗ್ರಾಮದಲ್ಲಿ ಈಜಲು ತೆರಳಿದ್ದ ಮೂವರು ಮಕ್ಕಳು ನೀರಿನಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಅ.8ರ ಮಂಗಳವಾರ ಸಂಜೆ ನಡೆದಿದೆ.

Advertisement

ಸಾಗರ್ (14), ಗುರು (14), ವಿನಯ್ (11) ಮೃತ ದುರ್ದೈವಿಗಳು.

ಕಾನಾಹೊಸಹಳ್ಳಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ 1 ವಾರದಿಂದ ಸತತವಾಗಿ ಸುರಿದ ಮಳೆಯಿಂದಾಗಿ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತದೆ. ಕುಮತಿ ಗ್ರಾಮದ ಪಕ್ಕದ ಹಳ್ಳದಲ್ಲಿ ನೀರು ಬಂದಿದ್ದು, ದಸರಾ ರಜೆಯಿದ್ದ ಕಾರಣ 3 ಬಾಲಕರು ಈಜಾಡಲು ತೆರಳಿದ್ದು, ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ.

ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಘಟನಾ ಸ್ಥಳಕ್ಕೆ ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿಬಾಬು ಹಾಗೂ ಡಿ.ವೈ.ಎಸ್.ಪಿ., ಮಲ್ಲೇಶಪ್ಪ ಮಲ್ಲಾಪುರ, ಸಿಪಿಐ ದೊಡ್ಡಣ್ಣ ಹಾಗೂ ಪಿಎಸೈ ಸಿದ್ದರಾಮ ಬಿದರಾಣಿ ಭೇಟಿ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next