Advertisement
ಸಂಸತ್ ದಾಳಿ ಸಂಚುಕೋರ ಅಫjಲ್ ಗುರುವನ್ನು ನೇಣಿಗೇರಿಸಿದ್ದನ್ನು ವಿರೋಧಿಸಿ 2016ರಲ್ಲಿ ಜೆಎನ್ಯು ಕ್ಯಾಂಪಸ್ನಲ್ಲಿ ಭಾರತ ವಿರೋಧಿ ಘೋಷಣೆ ಕೂಗಿದ್ದ ಕನ್ಹಯ್ಯ ಕುಮಾರ್, ಉಮರ್ ಖಾಲಿದ್, ಅನಿರ್ಬನ್ ಭಟ್ಟಾಚಾರ್ಯ ಸೇರಿದಂತೆ ಹಲವರ ಹೆಸರುಗಳನ್ನು ಚಾರ್ಜ್ಶೀಟ್ನಲ್ಲಿ ಉಲ್ಲೇಖೀಸಲಾಗಿದೆ.
Related Articles
Advertisement
1200 ಪುಟಗಳ ಆರೋಪಪಟ್ಟಿ: ಈ ಚಾರ್ಜ್ಶೀಟ್ 1200 ಪುಟಗಳನ್ನು ಹೊಂದಿದ್ದು, ಇದೇ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಾಶ್ಮೀರಿ ವಿದ್ಯಾರ್ಥಿಗಳಾದ ಅಖೀಬ್ ಹುಸೇನ್, ಮುಜೀಬ್ ಹುಸೇನ್, ಮುನೀಬ್ ಹುಸೇನ್, ಉಮರ್ ಗುಲ್, ರಯೀಸಾ ರಸೊಲ್, ಬಶೀರ್ ಭಟ್ ಮತ್ತು ಬಶರತ್ರನ್ನು ಕೂಡ ಹೆಸರಿಸಲಾಗಿದೆ. ಆದರೆ ಸಿಪಿಐ ನಾಯಕ ಡಿ.ರಾಜಾ ಪುತ್ರಿ ಅಪರಾಜಿತಾ ಹಾಗೂ ಜೆಎನ್ಯು ವಿದ್ಯಾರ್ಥಿ ಸಂಘಟನೆಯ ಉಪಾಧ್ಯಕ್ಷೆಯಾಗಿದ್ದ ಶೆಹ್ಲಾ ರಶೀದ್ ಸೇರಿ 36 ವಿದ್ಯಾರ್ಥಿಗಳ ವಿರುದ್ಧ ಸಾಕ್ಷ್ಯಾಧಾರ ಕೊರತೆ ಇರುವುದಾಗಿ ಉಲ್ಲೇಖೀಸಲಾಗಿದೆ.
ಪೊಲೀಸರು ಮತ್ತು ಮೋದಿಜೀಗೆ ನಾನು ಧನ್ಯವಾದ ತಿಳಿಸುತ್ತೇನೆ. 3 ವರ್ಷಗಳ ಬಳಿಕ ಹಾಗೂ ಚುನಾವಣೆ ಸಮೀಪಿಸುತ್ತಿರುವಾಗ ಆರೋಪಪಟ್ಟಿ ಸಲ್ಲಿಸಲಾಗಿದ್ದು, ಇದು ರಾಜಕೀಯ ಪ್ರೇರಿತ ಎಂಬುದು ಸ್ಪಷ್ಟವಾಗುತ್ತದೆ. ಶೀಘ್ರದಲ್ಲೇ ವಿಚಾರಣೆ ನಡೆಯಲಿ ಎಂದು ಬಯಸಿದ್ದೇವೆ. ಇದರಿಂದ ನಿಜಾಂಶ ಹೊರಬರಲಿದೆ. ಪೊಲೀಸರು ಸಾಕ್ಷ್ಯ ಎಂದು ದಾಖಲಿಸಿರುವ ವೀಡಿಯೋವನ್ನು ನಾವು ನೋಡಬೇಕಿದೆ.– ಕನ್ಹಯ್ಯ ಕುಮಾರ್, ಆರೋಪಿ ಸರಕಾರವು ಚುನಾವಣೆ ವರ್ಷದಲ್ಲಿ ರಾಜಕೀಯ ಆಟವನ್ನಾಡುತ್ತಿದೆ ಮತ್ತು ಗಮನ ಬೇರೆಡೆ ಸೆಳೆಯಲು ಯತ್ನಿಸುತ್ತಿದೆ. ನಾವು ಈ ಪ್ರಕರಣದ ವಿರುದ್ಧ ಹೋರಾಡುತ್ತೇವೆ ಮತ್ತು ನಾವು ನಿರಪರಾಧಿಗಳು ಎಂದು ಸಾಬೀತು ಮಾಡುತ್ತೇವೆ.
– ಉಮರ್ ಖಾಲಿದ್, ಆರೋಪಿ