Advertisement

ಸೋಲಿನ ಕಾರಣ ತಿಳಿಯಲು ಸತ್ಯ ಶೋಧನಾ ಸಮಿತಿ

06:23 AM Jun 04, 2019 | Team Udayavani |

ಬೆಂಗಳೂರು: ಕಳೆದ ವರ್ಷದ ವಿಧಾನಸಭೆ ಹಾಗೂ ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲಿನ ಬಗ್ಗೆ ವಾಸ್ತವ ತಿಳಿಯಲು ರಾಜ್ಯ ಕಾಂಗ್ರೆಸ್‌ ಉಪಾಧ್ಯಕ್ಷ ವಿ.ಆರ್‌. ಸುದರ್ಶನ್‌ ಅಧ್ಯಕ್ಷತೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಸತ್ಯ ಶೋಧನಾ ಸಮಿತಿ ರಚಿಸಿದ್ದಾರೆ.

Advertisement

ಎರಡೂ ಚುನಾವಣೆಯಲ್ಲಿ ಕಾಂಗ್ರೆಸ್‌ ಸೋಲಿಗೆ ಪ್ರಮುಖ ಕಾರಣ ಹಾಗೂ ಕಾಂಗ್ರೆಸ್‌ ಬಗ್ಗೆ ಜನರಿಗೆ ಇರುವ ಅನಿಸಿಕೆಗಳನ್ನು ತಿಳಿದುಕೊಳ್ಳಲು ಈ ಸಮಿತಿ ರಚಿಸಲಾಗಿದೆ. ಈ ಸಮಿತಿ ಜಿಲ್ಲೆಗಳಿಗೆ ಭೇಟಿ ನೀಡಿ ವಿಧಾನಸಭಾವಾರು ಬೂತ್‌ ಮಟ್ಟದಿಂದ ರಾಜ್ಯ ಮಟ್ಟದ ಮುಖಂಡರನ್ನು ಸಂಪರ್ಕಿಸಿ ಪಕ್ಷಕ್ಕೆ ಹಿನ್ನಡೆಯಾಗಲು ಕಾರಣಗಳನ್ನು ತಿಳಿದುಕೊಂಡು ವರದಿ ನೀಡುವಂತೆ ಸೂಚಿಸಲಾಗಿದೆ.

ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಅವರನ್ನು ಸಮಿತಿ ಸಂಚಾಲಕರನ್ನಾಗಿ ಮಾಡಲಾಗಿದೆ. ಮಾಜಿ ಸಚಿವರಾದ ವೀರಕುಮಾರ್‌ ಪಾಟೀಲ್‌, ನಜೀರ್‌ ಅಹಮದ್‌ ಹಾಗೂ ಮಾಜಿ ಸಂಸದ ಧ್ರುವ ನಾರಾಯಣ ಅವರನ್ನು ಸಮಿತಿ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next