ಚಿತ್ತಾಪುರ: ವಾಡಿ ಪುರಸಭೆ 23 ವಾಡ್ìಗಳ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ 13 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಇದು ಕ್ಷೇತ್ರದ ಅಭಿವೃದ್ಧಿಗೆ ಸಂದ ಜಯವಾಗಿದೆ ಎಂದು ಐಟಿ-ಬಿಟಿ ಮತ್ತು ಪ್ರವಾಸೋದ್ಯಮ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದರು.
ದೂರವಾಣಿ ಮೂಲಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿತ್ತಾಪುರ ತಾಲೂಕಿನಲ್ಲಿ ಮೊದಲಿನಿಂದಲೂ ಮತದಾರರು ಕಾಂಗ್ರೆಸ್ ಪರ ಇದ್ದರೂ. ಆದರೆ ಕಳೆದ ಬಾರಿ ವಾಡಿ ಪುರಸಭೆಯಲ್ಲಿ 23 ಸದಸ್ಯರ ಪೈಕಿ ಕಾಂಗ್ರೆಸ್ ಪಕ್ಷದಿಂದ 11 ಸದಸ್ಯರು ಗೆದ್ದಿದ್ದರು.
ಆದರೆ ಪಕ್ಷೇತರ ಅಭ್ಯರ್ಥಿಗಳು 5 ಜನ ಆಯ್ಕೆಯಾಗಿ ಬಿಜೆಪಿಗೆ ಬೆಂಲ ಸೂಚಿಸಿದ್ದರಿಂದ ಕಾಂಗ್ರೆಸ್ ಪಕ್ಷ ಅಧಿಕಾರ ಹಿಡಿಯುವುದು ಆಗಲಿಲ್ಲ. ಆದರೆ ಈ ಬಾರಿ ಮತ್ತೂಮ್ಮೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆ ಮಾಡಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.
ಈ ಸಲದ ಚುನಾವಣೆಯಲ್ಲಿ 10-12 ವಾಡ್ ìಗಳಲ್ಲಿ ಕಾಂಗ್ರೆಸ್ ಗೆಲ್ಲಬಹುದು ಎಂಬ ವಿಶ್ವಾಸವಿತ್ತು. ಆದರೆ ನೀರಿಕ್ಷೆಗೂ ಮೀರಿ ತಮ್ಮ ಅಭ್ಯರ್ಥಿಗಳು ಗೆಲುವು ಸಾಧಿಸಿರುವುದು ಸಂತಸವನ್ನುಂಟು ಮಾಡಿದೆ ಎಂದು ತಿಳಿಸಿದರು.
ತಾವು ತಾಲೂಕಿನಲ್ಲಿ ಕುಡಿಯುವ ನೀರು, ರಸ್ತೆ ಕಾಮಗಾರಿ ಸೇರಿದಂತೆ ವಿವಿಧ ಮೂಲಸೌಕರ್ಯ ಒದಗಿಸಿದ್ದು ಮತ್ತು ಅನೇಕ ಅಭಿವೃದ್ಧಿ ಕೆಲಸ ಮಾಡಿರುವುದನ್ನು ಗಮನಿಸಿದ ಮತದಾರರು ಚುನಾವಣೆಯಲ್ಲಿ ಕಾಂಗ್ರೆಸ್ ಪರ ಮತ ಚಲಾಯಿಸಿದ್ದಾರೆ ಎಂದು ತಿಳಿಸಿದರು.
ಕೆಲವು ವಾರ್ಡ್ಗಳಲ್ಲಿ ಬಿಜೆಪಿಯವರು ಹಣದ ಹೊಳೆಯೇ ಹರಸಿದ್ದರಿಂದ ಬಿಜೆಪಿ ಅಭ್ಯರ್ಥಿಗಳು ಗೆದಿದ್ದಾರೆ. ಉಳಿದ 13 ವಾರ್ಡ್ಗಳಲ್ಲಿ ಬಿಜೆಪಿಯವರ ಆಟ ನಡೆಯಲಿಲ್ಲ. ಇಲ್ಲಿ ಮತದಾರರು ಅಭಿವೃದ್ಧಿಗೆ ಮೆಚ್ಚಿ ಮತ ನೀಡಿದ್ದಾರೆ ಎಂದು ತಿಳಿಸಿದರು.