Advertisement

ಲಾಕ್‌ಡೌನ್‌ ಮುಂದುವರಿಸಲು ಆಗ್ರಹ

03:19 PM Apr 29, 2020 | Suhan S |

ಲೋಕಾಪುರ: ಲಾಕ್‌ಡೌನ್‌ ಮುಂದುವರಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಎಸ್‌.ಜಿ. ನಂಜಯ್ಯನಮಠ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Advertisement

ಗ್ರಾಮದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕೇವಲ 36 ಸಾವಿರ ಜನರ ಗಂಟಲು ಮಾದರಿ ಪರೀಕ್ಷೆ ಮಾಡಲಾಗಿದೆ. ಅದರಲ್ಲಿ 8 ಸಾವಿರ ವರದಿಗಳು ಬಾಕಿಯಿವೆ. ಇದರಲ್ಲಿ ಸೋಂಕಿತರ ಪ್ರಮಾಣ ಹೆಚ್ಚಾದರೆ, ರಾಜ್ಯದ ಪರಿಸ್ಥಿತಿ ಹದಗೆಡುತ್ತದೆ. ಅದಕ್ಕಾಗಿ ಸರಕಾರ ಗಂಭೀರತೆ ಅರಿತುಕೊಂಡು ಲಾಕ್‌ಡೌನ್‌ ಮುಂದುವರಿಸಲು ತೀರ್ಮಾನಿಸಬೇಕು ಎಂದರು.

ಉತ್ತರ ಕರ್ನಾಟಕದ ಬೆಳಗಾವಿ ವಿಭಾಗದಲ್ಲಿ ಹೆಚ್ಚು ಸೋಂಕಿತರ ಪ್ರಕರಣ ದಾಖಲಾಗಿವೆ. ಸರಕಾರವು ತ್ವರಿತ ಗತಿಯಲ್ಲಿ ರಕ್ತ ಮತ್ತು ಗಂಟಲು ದ್ರವ ಪರೀಕ್ಷೆ ಪ್ರಯೋಗಾಲಯವನ್ನು ಬಾಗಲಕೋಟೆಯಲ್ಲಿ ಆರಂಭಿಸಲು ಸರಕಾರಕ್ಕೆ ಮನವಿ ಮಾಡಿದರು. ವಿಧಾನ ಪರಿಷತ್‌ ಸದಸ್ಯ ಆರ್‌.ಬಿ. ತಿಮ್ಮಾಪುರ ಮಾತನಾಡಿ ವಿದೇಶದಿಂದ ಬಂದ ಪಿಪಿಇ ಕಿಟ್‌ ಗಳು ಕಳಪೆಯಾಗಿವೆ. ಇದರಿಂದ ರಾಜ್ಯದ ವೈದ್ಯರು ಭಯಪಡುವಂತಾಗಿದೆ. ರಾಜ್ಯ ಸರಕಾರ ಅವಶ್ಯಕತೆ ಅನುಗುಣವಾಗಿ ಪೌರಕಾರ್ಮಿಕರು, ಆಶಾ ಕಾರ್ಯಕರ್ತೆಯರಿಗೆ ಸ್ಯಾನಿಟೈಸರ್‌ ಮತ್ತು ಹ್ಯಾಂಡ್‌ ಗ್ಲೌಜ್‌ಗಳನ್ನು ನೀಡಿಲ್ಲ ಎಂದು ಟೀಕಿಸಿದರು.

ಜಿಪಂ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಮಹಾಂತೇಶ ಉದಪುಡಿ, ಬಿಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷ ಶಿವಾನಂದ ಉದಪುಡಿ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಮಹಾಂತೇಶ ಉದಪುಡಿ, ಬಿಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷ ಶಿವಾನಂದ ಉದಪುಡಿ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಲೋಕಣ್ಣ ಕೊಪ್ಪದ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next