Advertisement

ಪೂರ್ಣ ತರಗತಿ ನಡೆಸಲು ಆಗ್ರಹ

02:48 PM Jan 06, 2022 | Team Udayavani |

ಬೀದರ: ಸರ್ಕಾರಿ ಪದವಿ ಮತ್ತು ಸ್ನಾತಕೋತ್ತರ ಕಾಲೇಜುಗಳಲ್ಲಿ ಪೂರ್ಣ ಪ್ರಮಾಣದ ತರಗತಿ ನಡೆಯಲು ಕ್ರಮ ವಹಿಸಬೇಕು ಎಂದು ಆಗ್ರಹಿಸಿ ಬುಧವಾರ ನಗರದ ಪ್ರಥಮ ದರ್ಜೆ ಕಾಲೇಜು ಎದುರು ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

Advertisement

ಎಬಿವಿಪಿ ರಾಷ್ಟೀಯ ಕಾರ್ಯಕಾರಣಿ ಸದಸ್ಯ ರೇವಣಸಿದ್ದ ಜಾಡರ್‌ ನೇತೃತ್ವದಲ್ಲಿ ಸದಸ್ಯರು ಪ್ರತಿಭಟಿಸಿ ಉನ್ನತ ಶಿಕ್ಷಣ ಸಚಿವರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರಗೆ ಸಲ್ಲಿಸಿದರು.

ಕೋವಿಡ್‌ ಸೋಂಕು ಹಿನ್ನೆಲೆ ವಿದ್ಯಾರ್ಥಿಗಳು ಸಾಕಷ್ಟು ಸಂಕಷ್ಟ ಎದುರಿಸಿದ್ದಾರೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಈಗಾಗಲೇ ಪದವಿ, ಸ್ನಾತಕೋತ್ತರ ತರಗತಿಗಳೆಲ್ಲವೂ ಮರು ಪ್ರಾರಂಭವಾಗಿ, ವಿದ್ಯಾರ್ಥಿಗಳೆಲ್ಲ ಉತ್ಸಾಹದಿಂದ ಹಾಜರಾಗುತ್ತಿದ್ದಾರೆ. ಆದರೆ, ಪೂರ್ಣ ಪ್ರಮಾಣದ ಪಾಠಗಳು ನಡೆಯದಿರುವುದು ಶೋಚನಿಯ ಎಂದು ಮನವಿಯಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

ಎಬಿವಿಪಿ ಜಿಲ್ಲಾ ಪ್ರಮುಖ ಯೋಗೇಶ ಎಂ.ಬಿ, ನಗರ ಕಾರ್ಯದರ್ಶಿ ಪ್ರದೀಪ ರೆಡ್ಡಿ, ಪ್ರಮುಖರಾದ ಅರವಿಂದ ಸುಂದಳಕರ, ರಮೇಶ ಮಿರಜಾಪೂರೆ, ಅಂಬ್ರೇಶ ಬಿರಾದರ, ವಿಶಾಲ ಅತಿವಾಳ, ಉಷಾ ಕುಂಬಾರ, ಭಾರತಿ, ಸಂಜಯ ಪಾಟೀಲ, ಸೂರ್ಯಕಾಂತ ಕೋರಿ, ಶಿವಕಾಂತ ಪಾಟೀಲ, ಅತಿಥಿ ಉಪನ್ಯಾಸಕರಾದ ಡಾಂಗೆ ಎಂ. ಮಂಜುನಾಥ ಮಠಪತಿ, ಶಾಹೀಲ್‌ ಮತ್ತಿತರರು ಪ್ರತಿಭಟನೆಯಲ್ಲಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next