Advertisement

15 ಕ್ಷೇತ್ರಗಳಲ್ಲೂ ಗೆಲುವು ಖಚಿತ

11:10 PM Nov 24, 2019 | Team Udayavani |

ಹಾವೇರಿ: ಉಪ ಚುನಾವಣೆಯಲ್ಲಿ ಬೆಂಗಳೂರು ಶಿವಾಜಿನಗರ ಸೇರಿ 15 ಕ್ಷೇತ್ರದಲ್ಲಿ ಬಿಜೆಪಿ ಗೆಲುವು ನಿಶ್ಚಿತ. ಈಗ ಗೆಲುವು ಎಷ್ಟು ಅಂತರದಲ್ಲಿ ಇರಬೇಕು ಎನ್ನುವುದಷ್ಟೇ ಯೋಚನೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು. ಜಿಲ್ಲೆಯ ರಟ್ಟಿಹಳ್ಳಿಯಲ್ಲಿ ಪ್ರಚಾರ ಸಭೆಯಲ್ಲಿ ಮಾತನಾಡಿ, ಯಡಿಯೂರಪ್ಪ ಎಂದಿಗೂ ಕಲ್ಪನೆ ಮಾಡಿಕೊಂಡು ಹೇಳಿಕೆ ಕೊಟ್ಟು ಜನರನ್ನು ಮರುಳು ಮಾಡುವುದಿಲ್ಲ. ಗುಪ್ತಚರ ಮಾಹಿತಿ ಆಧರಿಸಿಯೇ ಹೇಳುತ್ತಿದ್ದು, ಎಲ್ಲ 15 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದರು.

Advertisement

ಕೇವಲ ಹಿರೇಕೆರೂರು ಮಾತ್ರವಲ್ಲ ಯಾವ 17 ಶಾಸಕರು ರಾಜೀನಾಮೆ ಕೊಟ್ಟು ನನ್ನ ಕೈ ಹಿಡಿದಿದ್ದಾರೋ ಅವರ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ಕೊಟ್ಟಿದ್ದೇನೆ; ಮುಂದೆಯೂ ಕೊಡುತ್ತೇನೆ. ಹಿರೇಕೆರೂರು ತಾಲೂಕು ಮಾದರಿ ಆಗಲು ಏನು ಬೇಕೋ ಅದೆಲ್ಲವನ್ನೂ ಕೊಡುತ್ತೇನೆ. ಬರುವ ಬಜೆಟ್‌ನಲ್ಲಿ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಯೋಚನೆ ಮಾಡಿದ್ದೇನೆ. ರೈತರು ಸ್ವಾಭಿಮಾನದಿಂದ ತಲೆ ಎತ್ತಿ ಓಡಾಡುವಂತೆ ಮಾಡುವುದು ನನ್ನ ಸಂಕಲ್ಪ ಎಂದರು.

ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಂಸದರಾದ ಬಿ.ವೈ. ರಾಘವೇಂದ್ರ, ಶಿವಕುಮಾರ ಉದಾಸಿ, ವಿಪ ಸದಸ್ಯರಾದ ಪ್ರದೀಶ ಶೆಟ್ಟರ್‌, ಎಸ್‌.ವಿ. ಸಂಕನೂರ, ಶಾಸಕರಾದ ನೆಹರು ಓಲೇಕಾರ, ವಿರುಪಾಕ್ಷಪ್ಪ ಬಳ್ಳಾರಿ, ಮಾಜಿ ಸಂಸದ ಮಂಜುನಾಥ ಕುನ್ನೂರು, ಮಾಜಿ ಶಾಸಕ ಯು.ಬಿ. ಬಣಕಾರ, ಪಕ್ಷದ ಅಭ್ಯರ್ಥಿ ಬಿ.ಸಿ. ಪಾಟೀಲ, ಪ್ರಮುಖರಾದ ಕುಮಾರ ಬಂಗಾರಪ್ಪ, ಚಿಂಚನಸೂರ, ಕೆ.ಪಿ. ನಂಜುಂಡಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next