Advertisement

ಕಾಂಗ್ರೆಸ್‌ 18 ಕ್ಷೇತ್ರದಲ್ಲಿ ಗೆಲುವು ನಿಶ್ಚಿತ

09:57 PM May 25, 2019 | Lakshmi GovindaRaj |

ಕೆ.ಆರ್‌.ನಗರ: ಪಟ್ಟಣದ ಪುರಸಭೆಗೆ ಮಾ.29ರಂದು ನಡೆಯುವ ಚುನಾವಣೆಯಲ್ಲಿ 23 ಸ್ಥಾನಗಳ ಪೈಕಿ ಕಾಂಗ್ರೆಸ್‌ ಪಕ್ಷ ಕನಿಷ್ಠ 18ರಲ್ಲಿ ಜಯಗಳಿಸಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಕೆಪಿಸಿಸಿ ಕಾರ್ಯಕಾರಿಣಿ ಸದಸ್ಯ ದೊಡ್ಡಸ್ವಾಮೇಗೌಡ ವಿಶ್ವಾಸ ವ್ಯಕ್ತಪಡಿಸಿದರು.

Advertisement

ಪಟ್ಟಣದ 7ನೇ ವಾರ್ಡಿನ ಕಾಂಗ್ರೆಸ್‌ ಅಭ್ಯರ್ಥಿ ಕೆ.ಎನ್‌.ಪ್ರಸನ್ನಕುಮಾರ್‌ ಪರವಾಗಿ ಮನೆ ಮನೆಗೆ ತೆರಳಿ ಮತ ಯಾಚಿಸಿ ಮಾತನಾಡಿದ ಅವರು ಪಟ್ಟಣದ ಜನರು ಕಾಂಗ್ರೆಸ್‌ ಪರವಾಗಿ ಒಲವು ತೋರುತ್ತಿದ್ದು, ಇದು ಪಕ್ಷದ ಗೆಲುವಿಗೆ ವರದಾನವಾಗಲಿದೆ ಎಂದರು.

ಕಾಂಗ್ರೆಸ್‌ ಸರ್ಕಾರದ ಅಧಿಕಾರದ ಅವಧಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೆ.ಆರ್‌.ನಗರ ಪಟ್ಟಣದ ಅಭಿವೃದ್ಧಿಗೆ ಸಾಕಷ್ಟು ಅನುದಾನ ನೀಡಿದ್ದು, ಅದನ್ನು ಪುರಷ್ಕರಿಸಿ ಮತದಾರ ಪ್ರಭುಗಳು ನಮ್ಮ ಬೆಂಬಲಕ್ಕೆ ನಿಲ್ಲಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಕಾರಿಣಿ ಸದಸ್ಯರು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಪ್ರಾಮಾಣಿಕವಾಗಿ ಕೆಲಸ ಮಾಡಿ ಕಾಂಗ್ರೆಸ್‌ ಅಭ್ಯರ್ಥಿಗಳ ಗೆಲುವಿಗೆ ದುಡಿಯಬೇಕು ಎಂದು ಮನವಿ ಮಾಡಿದರು.

ಆನಂತರ ದೊಡ್ಡಸ್ವಾಮೇಗೌಡ ಪಟ್ಟಣದ ವಿವಿಧ ವಾರ್ಡುಗಳಲ್ಲಿ ಪಾದಯಾತ್ರೆ ನಡೆಸಿ ಕಾಂಗ್ರೆಸ್‌ ಪಕ್ಷದ ವತಿಯಿಂದ ಸ್ಫರ್ಧಿಸಿರುವವರನ್ನು ಬೆಂಬಲಿಸಿ ಎಂದು ಕೋರಿದರು.

8ನೇ ವಾರ್ಡಿನ ಅಭ್ಯರ್ಥಿ ಶಿವಕುಮಾರ್‌, ಪುರಸಭೆ ಮಾಜಿ ಉಪಾಧ್ಯಕ್ಷ ಶಿವಶಂಕರ್‌, ಮಾಜಿ ಸದಸ್ಯರಾದ ಕೆ.ಎಲ್‌.ಕುಮಾರ್‌, ಗುರುಶಂಕರ್‌, ಕಾಂಗ್ರೆಸ್‌ ಮುಖಂಡರಾದ ರಾಜಣ್ಣ, ಶಿವಕುಮಾರ್‌, ಕೆ.ಸಿ.ಕುಮಾರ್‌, ಮಹದೇವ್‌, ವೆಂಕಟಪ್ಪ, ರವಿ, ಶ್ರೀನಿವಾಸ್‌, ಬಿ.ಕೆ.ರಾಜು, ಮಣಿಕಂಠ, ಚೇತನ್‌, ತಂಬಿನಟರಾಜು, ರಾಜು, ಭಾಸ್ಕರ ಮತ್ತಿತರರು ಹಾಜರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next