Advertisement

ಮಳೆಗೆ ಗೋಡೆ ಕುಸಿದು ಮೂವರಿಗೆ ಗಾಯ

12:59 PM Aug 28, 2017 | |

ರಾಯಚೂರು: ಜಿಲ್ಲೆಯ ವಿವಿಧೆಡೆ ಕಳೆದೆರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ರೈತರಿಗೆ ಸಂತಸ ಮೂಡಿದರೆ ಕೆಲವೆಡೆ ಅನಾಹುತ ಸಂಭವಿಸಿವೆ. ನಗರದ ಸಿಯಾತಲಾಬ್‌ ಬಡಾವಣೆಯಲ್ಲಿ ಶನಿವಾರ ರಾತ್ರಿ ಮನೆ ಗೋಡೆ ಕುಸಿದು ಬಿದ್ದ ಪರಿಣಾಮ ಮೂವರಿಗೆ ಗಾಯಗಳಾಗಿವೆ. ಪಕ್ಕದ ಮನೆಯ ಗೋಡೆ ಟಿನ್‌ ಶೆಡ್‌ ಗುಡಿಸಲಿನ ಮೇಲೆ ಬಿದ್ದಿದ್ದು, ಗುಡಿಸಲಿನಲ್ಲಿದ್ದ ಸೈದಾರೆಡ್ಡಿ (34), ನಾಗವೇಣಿ (26) ಹಾಗೂ ಸಂಸ್ಕೃತಿ (3) ಎಂಬ ಬಾಲಕಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ರಿಮ್ಸ್‌ಗೆ ದಾಖಲಿಸಲಾಗಿದೆ. ಗುಡಿಸಲಿನಲ್ಲಿ 10 ಜನ ಮಲಗಿದ್ದು, ಉಳಿದವರು ಅಪಾಯದಿಂದ ಪಾರಾಗಿದ್ದಾರೆ. ಎರಡು ದಿನಗಳಿಂದ ಸುರಿದ ಜೋರು ಮಳೆ ರೈತರಲ್ಲಿ ತುಸು ನೆಮ್ಮದಿ ಮೂಡಿಸಿದೆ. ನಗರ ಸೇರಿ ಮಾನವಿ, ಸಿಂಧನೂರು, ದೇವದುರ್ಗ, ಲಿಂಗಸುಗೂರು ತಾಲೂಕಿನ ಹಲವೆಡೆ ಶುಕ್ರವಾರ, ಶನಿವಾರ ರಾತ್ರಿ ಜೋರು ಮಳೆಯಾಗಿದೆ. ನಗರದಲ್ಲಿ ಅತೀ ಹೆಚ್ಚು 53 ಮಿ.ಮೀ. ಮಳೆ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next