Advertisement

Gundlupet ಶೌಚಾಲಯಕ್ಕೆ ಹೋಗುತ್ತೇನೆಂದು ಅಜ್ಜಿಗೆ ಮಗು ಕೊಟ್ಟು ಮಹಿಳೆ ಪರಾರಿ

08:10 PM Dec 20, 2023 | Team Udayavani |

ಗುಂಡ್ಲುಪೇಟೆ(ಚಾಮರಾಜನಗರ): ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಶೌಚಾಲಯಕ್ಕೆ ಹೋಗಿ ಬರುತ್ತೇನೆ, ಮಗು ನೋಡಿಕೊಳ್ಳಿ ಎಂದು ವೃದ್ಧೆಗೆ ಮಗು ಕೊಟ್ಟು ಮಹಿಳೆ ಪರಾರಿಯಾಗಿರುವ ಘಟನೆ ಬುಧವಾರ ಸಂಜೆ ನಡೆದಿದೆ.

Advertisement

ಗುಂಡ್ಲುಪೇಟೆ ಬಸ್ ನಿಲ್ದಾಣದಲ್ಲಿ ಬಸ್ ಗಾಗಿ ಕಾಯುತ್ತಿದ್ದ ಕಲಿಗೌಡನಹಳ್ಳಿ ಗ್ರಾಮದ ಮಹಾದೇವಮ್ಮ ಎಂಬ ವೃದ್ಧೆ ಬಳಿ ಬಂದ ಮಹಿಳೆ ತಾನು ಶೌಚಾಲಯಕ್ಕೆ ಹೋಗಿ ಬರುತ್ತೇನೆ ಮಗು ನೋಡಿಕೊಳ್ಳುತ್ತಿರಿ ಎಂದು ಹೇಳಿ ಮಗು ಕೊಟ್ಟು ವಾಪಾಸ್ ಬರದೇ ಪರಾರಿಯಾಗಿದ್ದಾಳೆ.

ಮಗು ಹೆಣ್ಣು ಮಗುವಾಗಿದ್ದು ಅಂದಾಜು 10 ತಿಂಗಳಿನಿಂದ ಒಂದೂವರೆ ವರ್ಷಗಳಾಗಿದೆ. ಸದ್ಯ ಮಗುವನ್ನು ಪಟ್ಟಣದ ಸಿಎಂಐ ಬಾಲಮಂದಿರಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದು, ಮಗು ಬಿಟ್ಟು ಪರಾರಿಯಾದ ಮಹಿಳೆ ಹುಡುಕಾಟಕ್ಕೆ ಗುಂಡ್ಲುಪೇಟೆ ಪೊಲೀಸರು ಸಿಸಿ ಕ್ಯಾಮೆರಾ ಪರಿಶೀಲಿಸುತ್ತಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next