Advertisement

Madikeri ಸ್ನಾನಕ್ಕೆಂದು ತೆರಳಿದ ಯುವಕ ನೀರು ಪಾಲು

12:53 AM Mar 21, 2024 | Team Udayavani |

ಮಡಿಕೇರಿ: ಸ್ನಾನಕ್ಕೆಂದು ತೆರಳಿದ ಯುವಕ ನೀರಿನಲ್ಲಿ ಮುಳುಗಿ ಸಾವಿಗೀಡಾದ ಘಟನೆ ಗುಡ್ಡೆಹೊಸೂರು ಬಳಿ ಕಾವೇರಿ ನದಿಯಲ್ಲಿ ನಡೆದಿದೆ.

Advertisement

ಏಳನೇ ಹೊಸಕೋಟೆಯ ತೊಂಡೂರು ನಿವಾಸಿ ಸುರೇಶ್‌ ಆಚಾರ್ಯ ಅವರ ದ್ವಿತೀಯ ಪುತ್ರ ಪ್ರದೀಪ್‌ (19) ಮೃತರು ಎಂದು ಗುರುತಿಸಲಾಗಿದೆ. ಬುಧವಾರ ತನ್ನ ಸ್ನೇಹಿತರೊಂದಿಗೆ ಗುಡ್ಡೆಹೊಸೂರು ಸಮೀಪದ ಬಾಳುಗೋಡಿಗೆ ತೆರಳಿದ ಪ್ರದೀಪ್‌ ಕಾವೇರಿ ನದಿಗೆ ಇಳಿದಿದ್ದರು. ಈ ಸಂದರ್ಭ ನೀರಿನಲ್ಲಿ ಸಿಲುಕಿ ಮೃತಪಟ್ಟಿದ್ದಾರೆ.

ಮೀನಿಗೆ ಹಾಕಿದ್ದ ಗಾಳದ ವಯರ್‌ ಪ್ರದೀಪ್‌ನ ಕುತ್ತಿಗೆಗೆ ಸಿಲುಕಿತ್ತು ಎಂದು ಹೇಳಲಾಗಿದೆ.

ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬಂದಿ ಸ್ಥಳಕ್ಕೆ ತೆರಳಿ ಮೃತದೇಹವನ್ನು ಹೊರತೆಗೆದಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next