Advertisement

ಬೆಳ್ಳಂಬೆಳಗ್ಗೆ ತೀರ್ಥಹಳ್ಳಿಯಲ್ಲಿ ಡಬಲ್ ಮರ್ಡರ್ !

11:04 AM May 18, 2023 | Kavyashree |

ತೀರ್ಥಹಳ್ಳಿ: ಕೂಲಿ ಕಾರ್ಮಿಕರಿಬ್ಬರ ಬರ್ಬರ ಹತ್ಯೆ ನಡೆದ ಘಟನೆ ಮೇ.18ರಂದು ಪಟ್ಟಣದ ಸಮೀಪದ ಕುರುವಳ್ಳಿಯ ಪುತ್ತಿಗೆ ಮಠದ ಸಮೀಪದ ವಿಶ್ವಕರ್ಮ ಸಮುದಾಯ ಭವನದೊಳಗೆ, ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ಮಂಜಪ್ಪ (45) ಬೀರಪ್ಪ (46) ಹತ್ಯೆಗೀಡಾದ ಕಾರ್ಮಿಕರು.

ದಾವಣಗೆರೆ ಮೂಲದ ಕಾರ್ಮಿಕರು ಎನ್ನಲಾಗುತ್ತಿದ್ದು, ರಾತ್ರಿ ಕುಡಿದು ಹಣದ ವ್ಯವಹಾರದಲ್ಲಿ ಈ ಹತ್ಯೆಯ ಘಟನೆ ನಡೆದಿರುವ ಶಂಕೆ ವ್ಯಕ್ತವಾಗುತ್ತಿದೆ.

ಸಮುದಾಯ ಭವನದ ಕೆಲಸಕ್ಕೆ ಬಂದಿದ್ದ ಕಾರ್ಮಿಕರ ಮೇಲೆ ಕಲ್ಲನ್ನು ಎತ್ತಿ ಹಾಕಿ ಬರ್ಬರವಾಗಿ ಕೊಲೆ ಮಾಡಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ. ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯಿಂದ ಬರಬೇಕಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next