Advertisement

ತೀರ್ಥಹಳ್ಳಿ : ಮೃತದೇಹ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ಪಲ್ಟಿ, ಓರ್ವನಿಗೆ ಗಾಯ

02:39 PM Aug 01, 2022 | Team Udayavani |

ತೀರ್ಥಹಳ್ಳಿ : ಮೃತದೇಹವನ್ನು ಸಾಗಿಸುತ್ತಿದ್ದ ಅಂಬ್ಯುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಆಗುಂಬೆ ಸಮೀಪದಲ್ಲಿ ನಡೆದಿದೆ.

Advertisement

ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ ತರೀಕೆರೆ ನಿವಾಸಿಯೊಬ್ಬರ ಮೃತದೇಹವನ್ನು ಸೋಮವಾರ ಬೆಳಿಗ್ಗೆ ಕರೆತರುತಿದ್ದಾಗ ಆಗುಂಬೆ ಸಮೀಪದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಆಂಬ್ಯುಲೆನ್ಸ್ ಪಲ್ಟಿಯಾಗಿರುವ ಘಟನೆ ನಡೆದಿದೆ.

ಅಪಘಾತದಲ್ಲಿ ಮೃತ ವ್ಯಕ್ತಿಯ ಮಗನಿಗೆ ಪೆಟ್ಟಾಗಿದ್ದು ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.

ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ : ಸಾವಿರ ಸಲ ಹೇಳುತ್ತೇನೆ ಅಂಜನಾದ್ರಿಯೇ ಹನುಮನ ಜನ ಸ್ಥಳ : ಸಿಎಂ ಬೊಮ್ಮಾಯಿ ಘೋಷಣೆ

Advertisement
Advertisement

Udayavani is now on Telegram. Click here to join our channel and stay updated with the latest news.

Next