Advertisement

Theft Case ನಾಲ್ವರು ಬಾಲಕರಿಂದ ಮತ್ತೆ ಕಳ್ಳತನ!

12:00 AM Jul 31, 2024 | Team Udayavani |

ಬೆಂಗಳೂರು: ಬಾಲ ನ್ಯಾಯ ಮಂಡಳಿಯಿಂದ ತಪ್ಪಿಸಿಕೊಂಡು ಬಂದು ಮತ್ತೆ ಕಳ್ಳತನ ಮಾಡಿದ್ದ ನಾಲ್ವರು ಅಪ್ರಾಪ್ತ ವಯಸ್ಕರನ್ನು ಪೀಣ್ಯ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಈ ಸಂಬಂಧ ಅವರ ಪೋಷಕರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಲಾಗಿದೆ.

Advertisement

ಬಾಲಕರಿಂದ 4 ಲಕ್ಷ ರೂ. ಮೌಲ್ಯದ 30 ಗ್ರಾಂ ಚಿನ್ನದ ಸರ, 2 ದ್ವಿಚಕ್ರ ವಾಹನ ಹಾಗೂ 1 ಆಟೋರಿಕ್ಷಾ ವಶಕ್ಕೆ ಪಡೆಯಲಾಗಿದೆ. ಕೆಲವು ದಿನಗಳ ಹಿಂದೆ ಕೆಂಪಯ್ಯ ಗಾರ್ಡನ್‌ ಬಳಿ ಮಹಿಳೆಯೊಬ್ಬರು ಬೆಳಗ್ಗೆ ಕೆಲಸಕ್ಕೆ ನಡೆದು ಹೋಗುತ್ತಿದ್ದಾಗ ದ್ವಿ-ಚಕ್ರ ವಾಹನದಲ್ಲಿ ಹಿಂಬಾಲಿ ಸಿದ ಬಾಲಕರು ಅಡ್ಡಗಟ್ಟಿ 30 ಗ್ರಾಂ ತೂಕದ ಚಿನ್ನದ ಸರ ಕಸಿದು ಪರಾರಿಯಾಗಿದ್ದರು.
ನಾಲ್ವರು ಬಾಲಕರು 10 ದಿನಗಳ ಹಿಂದಷ್ಟೇ ಬಾಲ ನ್ಯಾಯಮಂಡಳಿಯಿಂದ ತಪ್ಪಿಸಿಕೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next