Advertisement

ಕುಖ್ಯಾತ ಕಳ್ಳ ಎಸ್ಕೇಪ್‌: ಕಾರ್ತಿಕ್‌ ಬಂಧನ

10:22 AM Jul 28, 2022 | Team Udayavani |

ಬೆಂಗಳೂರು: ಬೀಗ ಹಾಕಿದ ಮನೆಗಳನ್ನೇ ಗುರುತಿಸಿ ಕನ್ನ ಹಾಕುತ್ತಿದ್ದ ಕುಖ್ಯಾತ ಕಳ್ಳ ಕಾರ್ತಿಕ್‌ ಅಲಿಯಾಸ್‌ ಎಸ್ಕೇಪ್‌ ಕಾರ್ತಿಕ್‌ನನ್ನು ಗೋವಿಂದರಾಜನಗರ ಠಾಣೆ ಪೊಲೀಸರು ಬಂಧಿಸಿ, 157 ಗ್ರಾಂ ಚಿನ್ನಾಭರಣ ಮತ್ತು 1 ಕೆ.ಜಿ. 424 ಗ್ರಾಂ ಬೆಳ್ಳಿಯ ಆಭರಣಗಳನ್ನು ಜಪ್ತಿ ಮಾಡಿದ್ದಾರೆ.

Advertisement

ಗೋವಿಂದರಾಜ ನಗರದ ನಿವಾಸಿ ಮಹಿಳೆಯೊಬ್ಬರು ಜೂ. 6ರಂದು ಬೆಳಗ್ಗೆ 11 ಗಂಟೆಗೆ ಚಿನ್ನದ ಮಾಂಗಲ್ಯ ಸರ ಬಿಚ್ಚಿ ಬ್ಯಾಗ್‌ನಲ್ಲಿ ಹಾಕಿ ಆ ಬ್ಯಾಗ್‌ ಅನ್ನು ಮನೆಯ ಟೇಬಲ್‌ ಮೇಲೆ ಇಟ್ಟು ಸ್ನಾನಕ್ಕೆ ಹೋಗಿದ್ದರು. ಆದರೆ, ಮನೆಯ ಮುಖ್ಯ ಬಾಗಿಲನ್ನು ಹಾಕಲು ಮರೆತಿದ್ದರು. ಇದೇ ರಸ್ತೆಯಲ್ಲಿ ಓಡಾಡುತ್ತಿದ್ದ ಆರೋಪಿ ಕಾರ್ತಿಕ್‌, ಮನೆಯ ಬಾಗಿಲು ತೆಗೆದಿರುವುದನ್ನು ಗಮನಿಸಿ ಮನೆಯೊಳಗೆ ನುಗ್ಗಿ ಟೇಬಲ್‌ ಮೇಲೆ ಇಟ್ಟಿದ್ದ ಮಾಂಗಲ್ಯ ಸರ ದೋಚಿ ಪರಾರಿಯಾಗಿದ್ದ. ಮಹಿಳೆ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಾರ್ತಿಕ್‌ನನ್ನು ಬಂಧಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next