Advertisement

ಶೃಂಗೇರಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಕಚೇರಿಯಲ್ಲಿ ಕಳ್ಳತನ

02:25 PM Apr 03, 2023 | Team Udayavani |

ಚಿಕ್ಕಮಗಳೂರು: ಶೃಂಗೇರಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸುಧಾಕರ್ ಶೆಟ್ಟಿ ಅವರ ಕಚೇರಿಯಲ್ಲಿ ಕಳ್ಳತನ ನಡೆಸಿರುವುದು ಕಂಡು ಬಂದಿದೆ.

Advertisement

ಕೊಪ್ಪ ಪಟ್ಟಣದ ಮುಖ್ಯರಸ್ತೆ ಪಕ್ಕದಲ್ಲಿರುವ ಕಚೇರಿಯ ಬಾಗಿಲ ಬೀಗ ಒಡೆದ ಕಳ್ಳರು ದಾಖಲೆಗಳ ಕಳ್ಳತನಕ್ಕೆ ಕಚೇರಿಯನ್ನು ಸಂಪೂರ್ಣವಾಗಿ ಜಾಲಾಡಿದ್ದಾರೆ.

ಚುನಾವಣೆಗಾಗಿ ಕೊಪ್ಪದಲ್ಲಿ ಸುಧಾಕರ್ ಶೆಟ್ಟಿ ಅವರು ಕಚೇರಿ ತೆರೆದಿದ್ದರು. ಚುನಾವಣೆಗೆ ಸಂಬಂಧಿಸಿದ ಕ್ಷೇತ್ರದ ಮಹತ್ವದ ದಾಖಲೆಗಳನ್ನ ಕಳ್ಳರು ಹೊತ್ತೊಯ್ದಿದ್ದಾರೆ. ಸ್ಥಳಕ್ಕೆ ಕೊಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next