Advertisement

ಮೂಳೂರು ಬಿಲ್ಲವ ಸಂಘಕ್ಕೆ ನುಗ್ಗಿದ ಕಳ್ಳರು: ಕಾಣಿಕೆ ಡಬ್ಬಿಯಿಂದ ನಗದು ಕಳವು

08:01 AM Feb 04, 2021 | Team Udayavani |

ಕಾಪು: ಮೂಳೂರು ಬಿಲ್ಲವ ಸಂಘದ ನಾರಾಯಣಗುರು ಮಂದಿರದ ಬೀಗ ಮುರಿದು ಒಳ ನುಗ್ಗಿದ ಕಳ್ಳರು, ಕಾಣಿಕೆ ಡಬ್ಬಿಯನ್ನು ಒಡೆದು ನಗ-ನಗದು ದೋಚಿ ಪರಾರಿಯಾದ ಘಟನೆ ನಡೆದಿದೆ.

Advertisement

ಮಂದಿರದ ಅರ್ಚಕರು ಗುರುವಾರ ಬೆಳಗ್ಗೆ ಪೂಜೆಗಾಗಿ ಆಗಮಿಸಿದ ವೇಳೆ, ಕಳ್ಳತನ‌ ವಿಚಾರ ಬೆಳಕಿಗೆ ಬಂದಿದ್ದು, ಬಳಿಕ ಸಂಘದ ಆಡಳಿತ ಮಂಡಳಿ ಮತ್ತು ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:ಕಾಪು ಲೈಟ್‌ಹೌಸ್‌ ಬಳಿಯ ಮೆಟ್ಟಿಲು ದುರಸ್ತಿ

ರಾಷ್ಟ್ರೀಯ ಹೆದ್ದಾರಿ 66ರ ಬಳಿಯಲ್ಲೇ ಇರುವ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ನಾರಾಯಣಗುರು ಮಂದಿರದಲ್ಲಿ ನಡೆದಿರುವ ಕಳ್ಳತನ ಪ್ರಕರಣವು ಸಾರ್ವಜನಿಕರನ್ನು ದಿಗ್ಬ್ರಮೆಗೊಳಿಸಿದೆ.

Advertisement

ಇದನ್ನೂ ಓದಿ: ಈ ರಾಶಿಯವರಿಂದು ಪಾಲುಗಾರಿಕೆಯ ವ್ಯವಹಾರದಲ್ಲಿ ಹೆಚ್ಚಿನ ಬಂಡವಾಳ ಹಾಕುವುದು ಉತ್ತಮವಲ್ಲ

ಕಾಪು ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next