ಸಾಗರ: ತಾಲೂಕಿನ ಕೆಳದಿಯ ರಾಮೇಶ್ವರ ದೇವಸ್ಥಾನದಲ್ಲಿ ಹುಂಡಿ ಒಡೆದು ಕಳ್ಳತನ ಮಾಡಿರುವ ಘಟನೆ ಶುಕ್ರವಾರ ತಡೆರಾತ್ರಿ ನಡೆದಿದೆ.
ಕಳ್ಳರು ಹೆಂಚು ತೆಗೆದು ಒಳ ನುಗ್ಗಿದ್ದು ಐದು ಹುಂಡಿಗಳನ್ನು ಹೊರಗೆ ತೆಗೆದುಕೊಂಡು ಹೋಗಿ, ಒಡೆದು ಹಣ ಕದ್ದೊಯ್ದಿರುವುದು ಕಂಡುಬಂದಿದೆ. ಒಡೆದ ಹುಂಡಿಯನ್ನು ದೇವಸ್ಥಾನದ ಆವರಣದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ.
ಇದನ್ನೂ ಓದಿ: ಶಿರಸಿ: ಆಟ ಆಡುತ್ತಿದ್ದಾಗ ಹಾವು ಕಚ್ಚಿ ಎರಡು ವರ್ಷದ ಮಗು ಮೃತ್ಯು
ಹುಂಡಿಯಲ್ಲಿ ಸುಮಾರು 2 ಲಕ್ಷಕ್ಕೂ ಹೆಚ್ಚು ಹಣ ಇತ್ತು ಎಂದು ಅಂದಾಜಿಸಬಹುದು. ದೇವಸ್ಥಾನದ ಸಿಸಿ ಕ್ಯಾಮೆರಾ ಅಳವಡಿಸದೇ ಇರುವುದು ದೊಡ್ಡ ಲೋಪವಾಗಿದೆ. ಈ ಕುರಿತು ಸ್ಥಳೀಯರು ಹಲವು ಬಾರಿ ಪ್ರಾಚ್ಯವಸ್ತು ಸಂಗ್ರಹಾಲಯಗಳು ಹಾಗೂ ಪರಂಪರೆ ಇಲಾಖೆಯ ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದರೂ ಪ್ರಯೋಜನವಾಗಿಲ್ಲ ಎಂದು ಮಾಹಿತಿಯನ್ನು ದೇವಸ್ಥಾನ ಸಮಿತಿಯ ನಿರ್ದೇಶಕ ಸಂದೀಪ್ ಆರೋಪಿಸಿದರು.
Related Articles
ಸಾಗರ ಗ್ರಾಮಾಂತರ ಪೋಲಿಸ್ ಠಾಣಾ ಪೋಲೀಸರು, ಶ್ವಾನದಳ, ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.