Advertisement

Theft: ಸಿಂಧನೂರು ಶಾಸಕ ಬಾದರ್ಲಿ ಮನೆಯಲ್ಲಿ ಕಳವು

08:17 AM Jul 19, 2024 | Team Udayavani |

ರಾಯಚೂರು: ನಗರದ ಬೈಪಾಸ್ ಸಮೀಪದ ಕೃಷ್ಣಾ ಮೆಡೋಸ್‌ ಬಡಾವಣೆಯಲ್ಲಿರುವ ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ ಅವರ ಮನೆಯಲ್ಲಿ ಕಳವಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

Advertisement

ಮನೆಯಲ್ಲಿ ಯಾರು ಇಲ್ಲದಿರುವುದನ್ನು ಗಮನಿಸಿದ ಕಳ್ಳರು ಬೀಗ ಮುರಿದು ಒಳಗಡೆ ನುಗ್ಗಿ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿ ಹೋಗಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಂ. ಪುಟ್ಟಮಾದಯ್ಯ ಹಾಗೂ ಹೆಚ್ಚುವರಿ ಎಸ್ಪಿ ಶಿವಕುಮಾರ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಳ್ಳತನಕ್ಕೆ ಸಂಬಂಧಿಸಿದಂತೆ ಶಾಸಕರ ಸಂಬಂಧಿ ಅನಿಲ್‌ ಪಾಟೀಲ್‌ ನೀಡಿದ ದೂರಿನ ಮೇರೆಗೆ ಪಶ್ಚಿಮ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next