Advertisement

ಅರ್ಕೇಶ್ವರ ದೇವಸ್ಥಾನ ಘಟನೆ ನೆನಪು ಮಾಸು ಮುನ್ನವೇ ಮತ್ತೊಂದು ದೇವಸ್ಥಾನಕ್ಕೆ ನುಗ್ಗಿದ ಕಳ್ಳರು

12:54 PM Sep 18, 2020 | keerthan |

ಮಂಡ್ಯ: ಇಲ್ಲಿನ ಅರ್ಕೇಶ್ವರ ದೇವಸ್ಥಾನದಲ್ಲಿ ಮೂವರ ಅರ್ಚಕರ ಕೊಲೆ ಮಾಡಿ ಹತ್ಯೆ ಮಾಡಿ ಹುಂಡಿ ದೋಚಿದ್ದ ಪ್ರಕರಣ ಮಾಸುವ ಮುನ್ನವೇ ಮದ್ದೂರು ತಾಲ್ಲೂಕಿನ ಕೆ.ಶೆಟ್ಟಹಳ್ಳಿ ಗ್ರಾಮದ ಆಂಜನೇಯ ದೇವಾಲಯದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದೆ.

Advertisement

ನಾಲ್ಕೈದು ದುಷ್ಕರ್ಮಿಗಳ ತಂಡ ದೇವಾಲಯದ ಬಾಗಿಲ ಕಬ್ಬಿನ ಸರಳುಗಳನ್ನು ಮುರಿದು ಒಳನುಗ್ಗಿದ್ದಾರೆ. ಈ ಕಳ್ಳರು ಹುಂಡಿಯ ಹಣ, ವಿವಿಧ ವಸ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ. ಇವರುಗಳ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೇವಾಲಯಗಳನ್ನೇ ಟಾರ್ಗೆಟ್ ಮಾಡಿಕೊಂಡು ಕಳ್ಳತನ ಮಾಡುತ್ತಿರುವುದು ಜಿಲ್ಲೆಯಲ್ಲಿ ದುಷ್ಕರ್ಮಿಗಳ ತಂಡ ಬೀಡು ಬಿಟ್ಟಿರುವ ಅನುಮಾನ ಮೂಡಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next