Advertisement

ಸಾಗರ: ಆರೋಗ್ಯಾಧಿಕಾರಿ ಮನೆಯಲ್ಲಿ ಕಳವು

07:41 PM Aug 10, 2022 | Suhan S |

ಸಾಗರ: ತಾಲೂಕು ಆರೋಗ್ಯಾಧಿಕಾರಿಗಳ ಮನೆಯಲ್ಲಿ ಯಾರು ಇಲ್ಲದಿರುವುದನ್ನು ಗಮನಿಸಿ ಬಂಗಾರದ ಆಭರಣ ಸೇರಿದಂತೆ ನಗದು ಕಳ್ಳತನ ಮಾಡಿದ ಘಟನೆ ಮಂಗಳವಾರ ಸಂಜೆ ನಗರದಲ್ಲಿ ನಡೆದಿದೆ.

Advertisement

ಇಲ್ಲಿನ ವರದಹಳ್ಳಿ ರಸ್ತೆಯಲ್ಲಿರುವ ತಾಲೂಕು ಆರೋಗ್ಯಾಧಿಕಾರಿ ಮೋಹನ್ ಅವರ ಮನೆಯಲ್ಲಿ ಈ ಕಳ್ಳತನ ನಡೆದಿದೆ.

ತಮ್ಮ ಕೆಲಸದ ನಿಮಿತ್ತ ಮನೆಗೆ ಬೀಗ ಹಾಕಿಕೊಂಡು ಶಿವಮೊಗ್ಗಕ್ಕೆ ಹೋದಾಗ ಕಳ್ಳರು ಮನೆಯ ಹಿಂಬಾಗಿಲ ಮೂಲಕ ಒಳ ಪ್ರವೇಶಿಸಿದ್ದು ಮನೆಯಲ್ಲಿದ್ದ 100 ಗ್ರಾಂ. ಚಿನ್ನಾಭರಣ ಹಾಗೂ 80 ಸಾವಿರ ರೂ. ನಗದು ಕಳ್ಳತನ ಮಾಡಿದ್ದಾರೆ ಎಂದು ಮೋಹನ್ ಅವರು ನಗರ ಪೋಲೀಸ್ ಠಾಣೆಯಲ್ಲಿ ಬುಧವಾರ ದೂರು ದಾಖಲಿಸಿದ್ದಾರೆ.

ಸ್ಥಳಕ್ಕೆ ನಗರ ಠಾಣೆ ಇನ್ಸ್ ಪೆಕ್ಟರ್ ಸೀತಾರಾಂ ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next