Advertisement

ಮಂಡ್ಯ ವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ: ಸಿಸಿಟಿವಿಯಲ್ಲಿ ಕಳ್ಳತನ ದೃಶ್ಯ ಸೆರೆ

12:30 PM Dec 30, 2021 | Team Udayavani |

ಮಂಡ್ಯ: ನಗರದ ರೈಲ್ವೆ ನಿಲ್ದಾಣದ ಬಳಿ ಇರುವ ಶ್ರೀ ವೀರಾಂಜನೇಯ ಸ್ವಾಮಿ ದೇವಾಲಯದಲ್ಲಿ ಮಂಗಳವಾರ ರಾತ್ರಿ ಕಳ್ಳನೊಬ್ಬ ಹುಂಡಿಯ ಹಣ ದೋಚುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

Advertisement

ದೇವಾಲಯದ ಹಿಂಭಾಗದ ಬಾಗಿಲ ಹೊಡೆದು ಒಳನುಗ್ಗುವ ಕಳ್ಳ ಹುಂಡಿಯ ಬೀಗ ಒಡೆದು ಇರುವ ಸ್ವಲ್ಪ ಹಣವನ್ನು ದೋಚಿದ್ದಾನೆ.

ಕಳೆದ ನಾಲ್ಕು ದಿನಗಳ ಹಿಂದೆ ಹನುಮ ಜಯಂತಿ ಮಾರನೇ ದಿನ ಹುಂಡಿ ಎಣಿಕೆ ಮಾಡಲಾಗಿತ್ತು. ಅಂದಿನಿಂದ ಹುಂಡಿಯಲ್ಲಿ ಸ್ವಲ್ಪ ಹಣ ಸಂಗ್ರಹವಾಗಿತ್ತು. ಅದನ್ನು ಕೊಂಡೊಯ್ದಿದ್ದಾನೆ ಎಂದು ಅರ್ಚಕ ಗೋಪಿ ಅವರು ತಿಳಿಸಿದರು.

ಬುಧವಾರ ಬೆಳಿಗ್ಗೆ ದೇವಾಲಯಕ್ಕೆ ಪೂಜೆ ಮಾಡಲು ಬಂದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ನಂತರ ಸಿಸಿ ಟಿವಿ ಪರಿಶೀಲಿಸಿದಾಗ ಕಳ್ಳನ ಕೈಚಳಕ ಸೆರೆಯಾಗಿದೆ.

ಇದನ್ನೂ ಓದಿ:ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು : ಮಹಿಳೆ ಸಾವು

Advertisement

ಹುಂಡಿ ಹಣ ತೆಗೆದಿದ್ದರಿಂದ ಹೆಚ್ಚಿನ ಹಣ ಸಿಕ್ಕಿಲ್ಲ. ಆದ್ದರಿಂದ ಯಾವುದೇ ದೂರು ದಾಖಲಿಸಿಲ್ಲ ಎಂದು ಅರ್ಚಕ ಉದಯವಾಣಿಗೆ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next