Advertisement

ನಾರಾವಿ: ಮಹಿಳೆಯ ಕೈಕಾಲು ಕಟ್ಟಿಹಾಕಿ ದರೋಡೆ; ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಪರಾರಿ

12:21 PM Nov 13, 2022 | Team Udayavani |

ವೇಣೂರು: ಒಂಟಿ ಮಹಿಳೆ ಇರುವ ಮನೆಗೆ ಬಂದ ನಾಲ್ವರು ಮುಸುಕುದಾರಿಗಳು ಮಹಿಳೆಯ ಕೈಕಾಲು ಕಟ್ಟಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ನ.12 ರಂದು ಸಂಜೆ ನಡೆದಿದೆ.

Advertisement

ಬೆಳ್ತಂಗಡಿ ತಾಲೂಕಿನ ನಾರಾವಿ ಸಮೀಪದ ಅರಸಿಕಟ್ಟೆಯ ಪ್ರಭಾವತಿ ನಾಯ್ಕ ಎಂಬವರ ಮನೆಯಲ್ಲಿ ಈ ದರೋಡೆ ಪ್ರಕರಣ ನಡೆದಿದೆ.

ಪ್ರಭಾವತಿ ನಾಯ್ಕರ ಮನೆಗೆ ಏಕಾಏಕಿ ಬಂದ ಮುಸುಕುದಾರಿಗಳು ಅವರ ಬಾಯಿಗೆ ಬಟ್ಟೆ ತುರುಕಿಸಿ, ಹಗ್ಗದಿಂದ ಕೈಕಾಲನ್ನು ಕಟ್ಟಿ ಹಾಕಿ, ಕುತ್ತಿಗೆಯಲ್ಲಿದ್ದ ಚಿನ್ನದ ಸರ, ಕಿವಿಯಲ್ಲಿದ್ದ ಬೆಂಡೋಲೆಯನ್ನು ಬಲಾತ್ಕಾರವಾಗಿ ತೆಗೆದು ಬಳಿಕ ಮನೆಯೊಳಗಿದ್ದ 3 ಚಿನ್ನದ ಬಳೆಗಳು, 3 ಚಿನ್ನದ ಉಂಗುರಗಳು, ಚಿನ್ನದ ಚೈನ್ ಹಾಗೂ ಒಂದು ಮೊಬೈಲ್‌ನ್ನು ದೋಚಿ ʼಎಂಕ್ಲು ಬತ್ತಿನಾ ಕೆಲಸ ಆಂಡ್ʼ ಎಂದು ತುಳುವಿನಲ್ಲಿ ಹೇಳುತ್ತಲೇ ದರೋಡೆಕೋರರು ಪರಾರಿಯಾಗಿದ್ದಾರೆ.

ಆರೋಪಿತರು ದೋಚಿದ ಚಿನ್ನದ ಅಂದಾಜು ಮೌಲ್ಯ ಒಟ್ಟು ರೂ. 4,60,000 ಆಗಬಹುದೆಂದು ಅಂದಾಜಿಸಲಾಗಿದೆ. ವೇಣೂರು ಠಾಣೆಯ ಪೊಲೀಸ್ ಉಪನಿರೀಕ್ಷಕಿ ಸೌಮ್ಯ ಜೆ. ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next