Advertisement

ವಿಟ್ಲ: ಪೆಟ್ರೋಲ್ ಬಂಕ್ ಕಚೇರಿಗೆ ನುಗ್ಗಿದ ಕಳ್ಳರು: ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಕಳವು

11:42 AM Jan 25, 2021 | Team Udayavani |

ವಿಟ್ಲ: ವಿಟ್ಲ- ಪುತ್ತೂರು ರಸ್ತೆಯಲ್ಲಿರುವ ಉರಿಮಜಲು ಎಸ್ಸಾರ್ ಪೆಟ್ರೋಲ್ ಬಂಕ್ ಗೆ ಕಳ್ಳರು ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಕಳವುಗೈದ ಘಟನೆ ನಿನ್ನೆ ತಡರಾತ್ರಿ ನಡೆದಿದೆ.

Advertisement

ಬಂಕ್ ನ ಕಚೇರಿಯ ಬೀಗ ಒಡೆದು ನುಗ್ಗಿದ ದರೋಡೆಕೋರರು ಕಂಪ್ಯೂಟರ್ ಮತ್ತು ಸಿಸಿ ಕ್ಯಾಮೆರಾಕ್ಕೆ ಸಂಬಂಧಿಸಿದ ಸಲಕರಣೆಗಳನ್ನು ದೋಚಿದ್ದಾರೆ.

ಇದನ್ನೂ ಓದಿ:ತೊಗರಿ ರಾಶಿಗೆ ಬೆಂಕಿ ಹಚ್ಚಿ, ಪಂಪ್ ಸೆಟ್ ವಿದ್ಯುತ್ ಸಂಪರ್ಕ ಕಡಿತ ಮಾಡಿದ ದುಷ್ಕರ್ಮಿಗಳು!

ಕಚೇರಿಯ ಎಲ್ಲಾ ಲಾಕರ್ ಗಳನ್ನು ಒಡೆದು ಅಸ್ತವ್ಯಸ್ತ ಮಾಡಿದ್ದಾರೆ. ಸುಮಾರು 2 ಲಕ್ಷದ ಸೊತ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ.

ವಿಟ್ಲ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ. ಎಷ್ಟು ಮೊತ್ತದ ನಗದನ್ನು ಕಳ್ಳರು ದೋಚಿದ್ದಾರೆ ಎಂಬುದು ತನಿಖೆಯಿಂದ ತಿಳಿಯಬೇಕಿದೆ. ಕೆಲ ಸಮಯದ ಹಿಂದೆ ಕುದ್ದುಪದವಿನಲ್ಲಿರುವ ಎಸ್ಸಾರ್ ಕಂಪನಿಯ ಬಂಕ್ ಗೆ ಕಳ್ಳರು ನುಗ್ಗಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next