Advertisement

Bantwal; ಕಳವು ಪ್ರಕರಣ: ಆರೋಪಿ ಸೆರೆ

12:41 AM Jan 14, 2024 | Team Udayavani |

ಬಂಟ್ವಾಳ: ಬಿ.ಸಿ.ರೋಡಿನ ಹೊಟೇಲ್‌ ಹಾಗೂ ಇತರ ಅಂಗಡಿಗಳಿಗೆ ನುಗ್ಗಿ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

Advertisement

ಬೆಳ್ತಂಗಡಿ ಪಡಂಗಡಿ ನಿವಾಸಿ ಹಮೀದ್‌ ಯಾನೆ ಕುಂಞ ಮೋನು ಬಂಧಿತ ಆರೋಪಿ. ಕಳೆದ ಎರಡು ವಾರಗಳ ಹಿಂದೆ ಬಿ.ಸಿ.ರೋಡಿನ ಹೊಟೇಲೊಂದರ ಸಿಸಿ ಕೆಮರಾಕ್ಕೆ ಅಡ್ಡಗಟ್ಟಿ ಹೊಟೇಲ್‌ ಹಾಗೂ ಸ್ಥಳೀಯ ಅಂಗಡಿಗಳಿಗೆ ನುಗ್ಗಿ ಕಳವು ಮಾಡಿದ್ದ.

ಈತ ಈ ಹಿಂದೆಯೂ ಹಲವು ಕಳವು ಕೃತ್ಯಗಳಲ್ಲಿ ಭಾಗಿಯಾಗಿದ್ದು, ಅದರ ಪ್ರಕರಣ ಎದುರಿಸುತ್ತಿದ್ದಾನೆ. ಜತೆಗೆ ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು ಎಂಬುದು ಪೊಲೀಸ್‌ ತನಿಖೆಯಲ್ಲಿ ಬಹಿರಂಗಗೊಂಡಿದೆ.

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, 15 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next