Advertisement

Theft Case ಮನೆಯಿಂದ ಚಿನ್ನಾಭರಣ ಕಳ್ಳತನ; ಆರೋಪಿಯ ಸೆರೆ

08:58 PM Sep 16, 2023 | Team Udayavani |

ಮಡಿಕೇರಿ: ಮನೆಯಿಂದ ಚಿನ್ನಾಭರಣ ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸುವಲ್ಲಿ ಗೋಣಿಕೊಪ್ಪ ಪೊಲೀಸರು ಯಶಸ್ವಿಯಾಗಿದ್ದಾರೆ.

Advertisement

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಸಾಗ್ಯ ಗ್ರಾಮ ನಿವಾಸಿ ಎಂ. ಮಲ್ಲೇಶ (24) ಬಂಧಿತ ಆರೋಪಿ. ಈತನ ಬಳಿಯಿಂದ 28 ಗ್ರಾಂ. ಚಿನ್ನಾಭರಣ, 1 ಬೆಳ್ಳಿ ಚೈನ್‌ ಸಹಿತ ಒಟ್ಟು 1.39 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಗೋಣಿಕೊಪ್ಪ ಪೊಲೀಸ್‌ ಠಾಣಾ ವ್ಯಾಪ್ತಿಯ ಮಾಯಮುಡಿ ಗ್ರಾಮದ ರಾಜಕಾಲನಿ ನಿವಾಸಿ ಎನ್‌. ಮಂಜುನಾಥ್‌ ಅವರು ಜೂ. 17ರಂದು ಮನೆಗೆ ಬೀಗ ಹಾಕಿ ಕೆಲಸಕ್ಕೆ ತೆರಳಿದ್ದರು. ಸಂಜೆ ಮನೆಗೆ ಬಂದು ನೋಡಿದಾಗ ಮಲಗುವ ಕೋಣೆಯ ಗೋದ್ರೇಜ್‌ನಲ್ಲಿಟ್ಟಿದ್ದ 1.35 ಲಕ್ಷ ರೂ. ಮೌಲ್ಯದ 28 ಗ್ರಾಂ ಚಿನ್ನಾಭರಣ ಮತ್ತು 4 ಸಾವಿರ ರೂ. ಮೌಲ್ಯದ 1 ಬೆಳ್ಳಿ ಚೈನ್‌ ಕಳುವಾಗಿರುವುದು ಕಂಡು ಬಂದಿತ್ತು. ಈ ಹಿನ್ನೆಲೆಯಲ್ಲಿ ಮಂಜುನಾಥ್‌ ಅವರು ಗೋಣಿಕೊಪ್ಪ ಠಾಣೆಯಲ್ಲಿ ದೂರು ನೀಡಿದ್ದರು.

ವಿರಾಜಪೇಟೆ ಡಿವೈಎಸ್‌ಪಿ ಮೋಹನ್‌ ಕುಮಾರ್‌ ಮಾರ್ಗದರ್ಶನದಲ್ಲಿ ಗೋಣಿಕೊಪ್ಪ ವೃತ್ತ ನಿರೀಕ್ಷಕ ಎ.ವಿ.ಗೋವಿಂದ ರಾಜು, ಪಿಎಸ್‌ಐ ರೂಪಾದೇವಿ, ಸಿಬಂದಿಗಳಾದ ಟಿ.ಪಿ. ಮಂಜುನಾಥ್‌, ಎಂ.ಕೆ. ಪೂವಯ್ಯ, ಎಂ. ಚಂದ್ರಶೇಖರ್‌, ಜಿ.ವಿ.ತೇಜಸ್‌ ಕುಮಾರ್‌, ಪಿ.ಎ.ಮಹಮದ್‌ ಅಲಿ, ಕೆ.ಎ.ಹನೀಫ್ ಮತ್ತು ಬಿ.ಎನ್‌.ಪುನೀತ್‌ ಅವರು ಸೆ.13ರಂದು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಬಳಿಯಿದ್ದ 1.39 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದು ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next