Advertisement

ಸಾಗರ ಪೇಟೆ ಪೋಲೀಸರ ಭರ್ಜರಿ ಕಾರ್ಯಾಚರಣೆ,7 ಬೈಕ್ ಸಹಿತ ಕಾರು ಕಳ್ಳ ಬಂಧನ

09:30 AM Dec 04, 2019 | keerthan |

ಶಿವಮೊಗ್ಗ: ಸಾಗರ ತಾಲೂಕಿನ ಪೇಟೆ ಪೋಲೀಸರ ಭರ್ಜರಿ ಕಾರ್ಯಾಚರಣೆಯಿಂದಾಗಿ ಸಾಗರ, ಶಿವಮೊಗ್ಗ ವ್ಯಾಪ್ತಿಯ ಹಲವು ಬೈಕ್ ಕಳ್ಳತನ ಪ್ರಕರಣಗಳು ಪತ್ತೆಯಾಗಿದೆ.

Advertisement

ಇಂದು ಬೆಳಗ್ಗಿನ ಜಾವ ವರದಹಳ್ಳಿ ಸರ್ಕಲ್ ಬಳಿ ವಾಹನ ತಪಾಸಣೆ ವೇಳೆ ಅನುಮಾನದ ಮೇರೆಗೆ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಈ ಕೃತ್ಯ ಬೆಳಕಿಗೆ ಬಂದಿದೆ.

ಆರೋಪಿಗಳು ತಾಜುದ್ಧೀನ್ (22), ಅರ್ಷದ್ (28) ಎಂದು ಗುರುತಿಸಲಾಗಿದ್ದು, ಇವರಿಬ್ಬರೂ ಶಿವಮೊಗ್ಗದ ನಿವಾಸಿಗಳಾಗಿದ್ದಾರೆ.

ಆರೋಪಿಗಳಿಂದ ಸಾಗರ ವ್ಯಾಪ್ತಿಯಲ್ಲಿ 1 ಕಾರು 3 ಬೈಕ್ ಕಳ್ಳತನ, ಶಿವಮೊಗ್ಗ ವ್ಯಾಪ್ತಿಯಲ್ಲಿ 4 ಬೈಕ್ ಕಳ್ಳತನ ಪ್ರಕರಣ ಪತ್ತೆಯಾಗಿದೆ.

ಒಟ್ಟು 8 ಪ್ರಕರಣಗಳು  16,40,000 ರೂ.ಮೌಲ್ಯದ ವಸ್ತುಗಳು ವಶಪಡಿಸಿಕೊಳ್ಳಲಾಗಿದೆ.

Advertisement

ಆರೋಪಿಗಳ ಪತ್ತೆಗಾಗಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಶಾಂತರಾಜು, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಚ್.ಟಿ ಶೇಖರ್ ಇವರ ಮಾರ್ಗದರ್ಶನದಲ್ಲಿ, ಸಾಗರ ಸಹಾಯಕ ಪೊಲೀಸ್ ಅಧೀಕ್ಷಕ ಯತೀಶ್ ಸೂಚನೆಯಂತೆ ಒಂದು ವಿಶೇಷ ತಂಡವನ್ನು ರಚಿಸಲಾಗಿತ್ತು.

ಕಾರ್ಯಾಚರಣೆಯಲ್ಲಿ ಪೇಟೆ ಪೋಲೀಸ್ ಇನ್ಸ್ ಪೆಕ್ಟರ್ ಮಹಾಬಲೇಶ್ವರ್, ಪಿಎಸ್ಐ ಸಾಗರ್ಕರ್, ಪ್ರೋಪೇಷನರಿ ಪಿಎಸ್ಐ ಯಲ್ಲಪ್ಪ ಹಾಗೂ ಅಪರಾಧ ವಿಭಾಗದ ಸಿಬ್ಬಂದಿಗಳಾದ  ಕಾಳಾನಾಯ್ಕ್, ಸಂತೋಷ್, ವಿಶ್ವನಾಥ್, ಮಲ್ಲೇಶ್, ಶ್ರೀಧರ್, ಸನಾವುಲ್ಲಾ ಪಾಲ್ಗೊಂಡಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next