Advertisement

Theft: ಇಬ್ಬರು ಕಳ್ಳರ ಸೆರೆ, 8 ವಾಹನ ಜಪ್ತಿ

03:25 PM Nov 23, 2023 | Team Udayavani |

ಬೆಂಗಳೂರು: ರಸ್ತೆ ಬದಿಯಲ್ಲಿ ನಿಲುಗಡೆ ಮಾಡಿದ್ದ ಬೈಕ್‌ಗಳ ಹ್ಯಾಂಡಲ್‌ ಲಾಕ್‌ ಮುರಿದು ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಜ್ಞಾನಭಾರತಿ ಪೊಲೀಸ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.

Advertisement

ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ವಿನೋದ್‌ ರಾಜ್‌ ಮತ್ತು ನಂಜುಂಡ ಬಂಧಿತರು. ಆರೋಪಿಗಳಿಂದ 3 ಲಕ್ಷ ರೂ. ಮೌಲ್ಯದ 8 ಬೈಕ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಇತ್ತೀಚೆಗೆ ಠಾಣೆ ವ್ಯಾಪ್ತಿಯಲ್ಲಿ ಅಜಯ್‌ ಎಂಬವರ ಬೈಕ್‌ ಕಳವು ಮಾಡಿದ್ದರು.

ಆರೋಪಿಗಳ ಬಂಧನದಿಂದ ಜ್ಞಾನಭಾರತಿ, ಚಂದ್ರಾಲೇಔಟ್‌, ಅನ್ನಪೂರ್ಣೇಶ್ವರಿ ನಗರ, ಬ್ಯಾಟರಾಯನಪುರ, ಸುಬ್ರಹ್ಮಣ್ಯನಗರ, ಹಾಗೂ ಮೈಸೂರಿನ ಲಷ್ಕರ್‌ ಪೊಲೀಸ್‌ ಠಾಣೆಗಳಲ್ಲಿ ತಲಾ ಒಂದೊಂದು ವಾಹನ ಕಳವು ಪ್ರಕರಣಗಳು ಪತ್ತೆಯಾಗಿವೆ. ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next