Advertisement

ತೆಕ್ಕಟ್ಟೆ: ಶ್ವಾನದ ಮೇಲೆ ಎರಗಿದ ಚಿರತೆ

01:35 AM Feb 11, 2023 | Team Udayavani |

ತೆಕ್ಕಟ್ಟೆ: ಇಲ್ಲಿನ ಕುದ್ರುಮನೆ ನಿವಾಸಿ ನಾಗೇಶ್‌ ದೇವಾಡಿಗ ಅವರ ಮನೆಯ ಸಾಕು ನಾಯಿಯ ಮೇಲೆ ಚಿರತೆಯೊಂದು ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ಫೆ.10ರ ರಾತ್ರಿ ಸಂಭವಿಸಿದೆ.

Advertisement

ಮನೆಯ ಅಂಗಳದಲ್ಲಿ ಮಲಗಿದ್ದ ನಾಯಿಯ ಮೇಲೆ ಚಿರತೆ ಏಕಾಏಕಿ ದಾಳಿ ನಡೆಸಿದ್ದು, ನಾಯಿಯ ಕುತ್ತಿಗೆಯ ಭಾಗದಲ್ಲಿ ತೀವ್ರ ಸ್ವರೂಪದ ಗಾಯಗಳಾಗಿವೆ.

ಹದಿನೈದು ದಿನಗಳ ಹಿಂದೆಯಷ್ಟೇ ಜನವಸತಿ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು ಪರಿಸರದ ಜನತೆಯಲ್ಲಿ ಆತಂಕ ಸೃಷ್ಟಿಯಾಗಿದೆ. ಅರಣ್ಯ ಇಲಾಖೆಯವರು ತತ್‌ ಕ್ಷಣವೇ ಚಿರತೆ ಸೆರೆ ಹಿಡಿಯಲು ಬೋನ್‌ ಇರಿಸುವಂತೆ ಸ್ಥಳೀಯ ಕೃಷಿಕ ಶ್ರೀನಾಥ್‌ ಶೆಟ್ಟಿ ಮೇಲ್ತಾರುಮನೆ ಅವರು ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next