Advertisement

ಗಾವಳಿ ಸೇತುವೆ ಬಳಿ ಲಾರಿಗಳ ಮುಖಾಮುಖೀ ಢಿಕ್ಕಿ: ಪ್ರಯಾಣಿಕ ಗಂಭೀರ, 12 ಗಂಟೆ ರಸ್ತೆ ಸಂಚಾರ ಬಂದ್‌

10:44 AM Nov 27, 2022 | Team Udayavani |

ತೆಕ್ಕಟ್ಟೆ : ಕುಂದಾಪುರ ತಾಲೂಕಿನ ಹಾರ್ದಳ್ಳಿ ಮಂಡಳ್ಳಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಗಾವಳಿ ಸೇತುವೆ ತಿರುವಿನಲ್ಲಿ ಶನಿವಾರ ರಾತ್ರಿ ಗಂಟೆ 11ರ ಸುಮಾರಿಗೆ ಲಾರಿಗಳು ಮುಖಾಮುಖೀ ಢಿಕ್ಕಿಯಾಗಿ ಸಂಪೂರ್ಣ ನುಜ್ಜುಗುಜ್ಜಾದ ಘಟನೆ ಸಂಭವಿಸಿದೆ.

Advertisement

ಬಿದ್ಕಲ್‌ಕಟ್ಟೆಯಿಂದ ಬ್ರಹ್ಮಾವರದ ಕಡೆಗೆ ರಬ್ಬರ್‌ ಮರ ತುಂಬಿಸಿಕೊಂಡು ಹೋಗುತ್ತಿದ್ದ ಲಾರಿ ಅತೀ ವೇಗದಿಂದ ಬಂದು ಎದುರಿನಲ್ಲಿ ಖೋಕ್‌ ಸಾಗುತ್ತಿದ್ದ ಲಾರಿಗೆ ನೇರವಾಗಿ ಬಂದು ಢಿಕ್ಕಿ ಹೊಡೆದಿದ್ದಾರೆ ಎಂದು ಹೇಳಲಾಗಿದೆ. ಪರಿಣಾಮ ಲಾರಿಯಲ್ಲಿ ಪ್ರಯಾಣಿಸುತ್ತಿದ್ದ ಬಸ್‌ ಚಾಲಕನೋರ್ವ ಗಂಭೀರ ಗಾಯಗಳಾಗಿ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆಯ ತೀವ್ರತೆಗೆ ಲಾರಿಯ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ.

12 ಗಂಟೆಗಳ ಕಾಲ ರಸ್ತೆ ಸಂಚಾರ ಬಂದ್‌ : ಗಾವಳಿ – ಬಿದ್ಕಲ್‌ಕಟ್ಟೆ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿ ಈ ಭೀಕರ ರಸ್ತೆ ಅಪಘಾತದಿಂದಾಗಿ ಈ ಮಾರ್ಗದ ವಾಹನ ಸಂಚಾರ ಸಂಪೂರ್ಣ ಬಂದ್‌ ಆಗಿದ್ದು, ರಾತ್ರಿ 11 ಗಂಟೆಯಿಂದಲೂ ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಬಿದ್ಕಲ್‌ಕಟ್ಟೆ ಗುಡ್ಡೆಅಂಗಡಿ ಮಾರ್ಗದ ಮೂಲಕ ಸಂಚರಿಸಬೇಕಾದ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದ್ದು ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಈ ಬಗ್ಗೆ ಸಂಬಂಧಪಟ್ಟ ಕೋಟ ಪೋಲೀಸ್‌ ಠಾಣಿಗೆ ಸ್ಥಳೀಯರು ಮಾಹಿತಿ ನೀಡಿದರು ಕೂಡಾ ಸೂಕ್ತ ಸ್ಪಂದನೆ ದೊರಕಲಿಲ್ಲ ಎಂದು ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಅಸ್ಸಾಂ: ಐರನ್, ಫೋಲಿಕ್ ಆಸಿಡ್ ಮಾತ್ರೆ ಸೇವಿಸಿದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next