Advertisement

ರಾಜ್ಯದಲ್ಲಿ ಐವರು ಸಿಎಂಗಳು: ಗೋವಾ ಸಿಎಂ ಸಾವಂತ್‌ ವ್ಯಂಗ್ಯ

08:50 PM Apr 04, 2024 | Team Udayavani |

ಮಂಡ್ಯ: ಕರ್ನಾಟಕದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್‌ ಸರಕಾರದಲ್ಲಿ ಸಿಎಂ, ಮತ್ತೂಬ್ಬರು ಸೂಪರ್‌ ಸಿಎಂ ಸಹಿತ ಐವರು ಮುಖ್ಯಮಂತ್ರಿಗಳಿದ್ದಾರೆ ಎಂದು  ಗೋವಾ ಮುಖ್ಯಮಂತ್ರಿ ಡಾ| ಪ್ರಮೋದ್‌ ಸಾವಂತ್‌ ಟೀಕಿಸಿದರು.

Advertisement

ಜೆಡಿಎಸ್‌-ಬಿಜೆಪಿ ಮೈತ್ರಿಕೂಟದಿಂದ ಹಮ್ಮಿಕೊಂಡಿದ್ದ ಬಹಿರಂಗ ಸಭೆಯನ್ನು ಉದ್ಘಾಟಿಸಿ   ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್‌  ಜಾತಿ, ಧರ್ಮದ ಆಧಾರದಲ್ಲಿ ಸರಕಾರ ನಡೆಸುತ್ತಿದ್ದು, ಅಭಿವೃದ್ಧಿ ಶೂನ್ಯವಾಗಿದೆ. ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಅಭಿವೃದ್ಧಿಯ ಆಡಳಿತ ನೀಡುತ್ತಿರುವ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಮತ್ತೂಮ್ಮೆ ಅ ಧಿಕಾರಕ್ಕೆ ಬರಲು ರಾಜ್ಯದ 28 ಕ್ಷೇತ್ರದಲ್ಲೂ ಎನ್‌ಡಿಎ ಅಭ್ಯರ್ಥಿಗಳು ಗೆಲ್ಲಬೇಕು ಎಂದು ಸಲಹೆ ನೀಡಿದರು.

ವಿಧಾನಸಭಾ ಚುನಾವಣೆಗೆ ಮುನ್ನ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿಯಾಗಿದ್ದರೆ, ರಾಜ್ಯದಲ್ಲಿ ಡಬಲ್‌ ಎಂಜಿನ್‌ ಸರಕಾರ ಅಸ್ತಿತ್ವದಲ್ಲಿರುತ್ತಿತ್ತು. ಆದರೆ ಅದು ಆಗಲಿಲ್ಲ. ಇದು ಕಾಂಗ್ರೆಸ್‌ಗೆ ಅನುಕೂಲವಾಯಿತು. ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಗಳನ್ನು ರಾಜ್ಯದ 28 ಕ್ಷೇತ್ರಗಳಲ್ಲಿ ಚುನಾಯಿಸಿದರೆ, ರಾಜ್ಯದ ಅಭಿವೃದ್ಧಿಯ ವೇಗ ಹೆಚ್ಚಾಗುತ್ತದೆ. ಅದಕ್ಕಾಗಿ ರಾಜ್ಯದ ಮತದಾರರು ಎನ್‌ಡಿಎಯನ್ನು ಬೆಂಬಲಿಸುವ ಮೂಲಕ ಇತಿಹಾಸ ಸೃಷ್ಟಿಸಬೇಕಿದೆ ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next